ಕರ್ನಾಟಕ ಮಳೆ ಇಫೆಕ್ಟ್: ತರಕಾರಿ, ಹಣ್ಣು ಬೆಲೆ ಕೇಳೋ ಹಾಗೆಯೇ ಇಲ್ಲ

Krishnaveni K
ಮಂಗಳವಾರ, 6 ಆಗಸ್ಟ್ 2024 (09:37 IST)
ಬೆಂಗಳೂರು:  ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಜನರಿಗೆ ಹೊರೆಯಾಗುತ್ತಿದೆ.

ಬೆಂಗಳೂರಿನಲ್ಲಿ ಮಳೆ ಶುರುವಾದಾಗಿನಿಂದ ತರಕಾರಿ ಬೆಲೆ ಗಗನಕ್ಕೇರುತ್ತಲೇ ಇದೆ. ಇದರ ನಡುವೆ ಕೆಲವು ದಿನ ತಕ್ಕಮಟ್ಟಿಗೆ ಇಳಿಕೆಯಾಗಿತ್ತು. ಆದರೆ ಕಳೆದ ಎರಡು ವಾರಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದೆ ನೆರೆಯ ವಾತಾವರಣವಿದೆ. ಇದರಿಂದಾಗಿ ರೈತರು ಬೆಳೆದ ಬೆಳೆಯೂ ನಷ್ಟವಾಗಿದೆ.

ಹೀಗಾಗಿ ಸಹಜವಾಗಿಯೇ ತರಕಾರಿ ಬೆಲೆ ಗಗನಕ್ಕೇರಿದೆ. ಕೇವಲ ತರಕಾರಿ ಮಾತ್ರವಲ್ಲ, ಹಣ್ಣುಗಳ ಬೆಲೆಯೂ ದುಪ್ಪಟ್ಟಾಗಿದೆ. ಇನ್ನೇನು ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದು ಬೆಲೆ ಏರಿಕೆ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರತಿನಿತ್ಯ ಬಳಕೆ ಮಾಡುವ ತರಕಾರಿ ಹಣ್ಣುಗಳ ಬೆಲೆ ಏರಿಕೆಯಾಗಿದೆ.

ಬೀನ್ಸ್, ಕ್ಯಾರಟ್, ನುಗ್ಗೆಕಾಯಿ, ಬದನೆ 100 ರ ಗಡಿ ದಾಟಿದೆ. ಬಟಾಣಿ, ಬೆಳ್ಳುಳ್ಳಿ ಅಂತೂ 300 ರ ಗಡಿ ದಾಟಿದೆ. ಈರುಳ್ಳಿ ಕೆಜಿಗೆ 60 ರೂ. ತಲುಪಿದೆ. ದಪ್ಪಮೆಣಸಿನಕಾಯಿ, ಹಾಗಲಕಾಯಿ, ಹೀರೇಕಾಯಿ 80 ರೂ. ದಾಟಿದೆ. ಕೊತ್ತಂಬರಿ ಸೊಪ್ಪು 70, ಪುದಿನಾ 90 ರ ಗಡಿ ಮುಟ್ಟಿದೆ. 

ಹಣ್ಣುಗಳ ಕತೆಯೂ ಇದೇ. ಸೇಬು,  ದ್ರಾಕ್ಷಿ 300 ರ ಗಡಿ ದಾಟಿದೆ. ಬಟರ್ ಫ್ರೂಟ್ ಸೀಸನ್ ಆಗಿದ್ದರೂ 250 ರೂ. ಇದೆ. ಕಿತ್ತಳೆ, ಸಪೋಟ 200, ಪೈನಾಪಲ್ 150 ರೂ.ಗಳಷ್ಟಿದೆ. ಮೂಸಂಬಿ 140, ಬಾಳೆ ಹಣ್ಣು 80, ಪಪ್ಪಾಯ 50 ರೂ.ಗಳಷ್ಟು ಬೆಲೆ ಬಾಳುತ್ತಿದೆ. ಹೀಗೇ ಆದರೆ ಹಬ್ಬ ಆಚರಿಸುವುದು ಹೇಗೆ ಎಂಬ ಚಿಂತೆ ಬೆಂಗಳೂರಿಗರದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments