Webdunia - Bharat's app for daily news and videos

Install App

Karnataka Rains: ಈ ದಿನದವರೆಗೂ ಇರಲಿದೆ ಮಳೆಯ ಅಬ್ಬರ

Krishnaveni K
ಶುಕ್ರವಾರ, 25 ಜುಲೈ 2025 (08:37 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ನಿರಂತರ ಮಳೆಯಾಗುತ್ತಿದೆ. ಇನ್ನೆಷ್ಟು ದಿನ ರಾಜ್ಯದಲ್ಲಿ ಮಳೆಯ ಅಬ್ಬರವಿರಲಿದೆ ಇಲ್ಲಿದೆ ಹವಾಮಾನ ವರದಿ.

ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳಿದೆ. ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ನಿರಂತರ ಮಳೆಯಾಗುತ್ತಿದೆ. ಈ ವಾರವಿಡೀ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಉಳಿದಂತೆ ರಾಜ್ಯದ ಬಹುತೇಕ ಕಡೆ ಈ ವಾರವಿಡೀ ಮಳೆಯಾಗುತ್ತಿದೆ. ಇದೀಗ ಹವಾಮಾನ ವರದಿ ಪ್ರಕಾರ ಇನ್ನೂ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು  ವರದಿಗಳು ಹೇಳುತ್ತಿವೆ. ಜುಲೈ 29 ರ ನಂತರ ಮಳೆಯ ಅಬ್ಬರ ಕಡಿಮೆಯಾಗುವ ಸೂಚನೆಯಿದೆ.

ಉಳಿದಂತೆ ಕಲಬುರಗಿ, ಬೀದರ್, ಗದಗ, ಕೊಪ್ಪಳ, ರಾಯಚೂರು, ಮೈಸೂರು, ತುಮಕೂರು, ಹಾವೇರಿ, ಬಾಗಲಕೋಟೆ, ಚಾಮರಾಜನಗರ, ಯಾದಗಿರಿ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಚಿತ್ರದುರ್ಗ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ  ವರದಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments