Webdunia - Bharat's app for daily news and videos

Install App

Karnataka Rains: ಇಂದು ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಇಲ್ಲಿದೆ ಹವಾಮಾನ ವರದಿ

Krishnaveni K
ಮಂಗಳವಾರ, 27 ಮೇ 2025 (08:26 IST)
ಬೆಂಗಳೂರು: ಕರ್ನಾಟಕದಾದ್ಯಂತ ಈಗ ಮುಂಗಾರು ಮಳೆ ರುದ್ರನರ್ತನ ಮಾಡುತ್ತಿದೆ. ಇಂದು ರಾಜ್ಯದ ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಇಲ್ಲಿದೆ ವಿವರ.

ಹವಾಮಾನ ವರದಿ ಪ್ರಕಾರ ಈ ವಾರವಿಡೀ ರಾಜ್ಯದಾದ್ಯಂತ ಮಳೆಯಾಗಲಿದೆ. ಅದರಲ್ಲೂ ಕೆಲವೊಂದು ಜಿಲ್ಲೆಗಳಲ್ಲಂತೂ ವಿಪರೀತ ಮಳೆಯಾಗಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ವಾರವಿಡೀ ಈ ಜಿಲ್ಲೆಗಳಲ್ಲಿ ಇದೇ ವಾತಾವರಣ ಮುಂದುವರಿಯಲಿದೆ.

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದ್ದರೂ ದಿನವಿಡೀ ಮೋಡ ಕವಿದ ವಾತಾವರಣ, ವಿಪರೀತ ಗಾಳಿ ಬೀಸುತ್ತಿದೆ. ಪರಿಣಾಮ ಜನರು ಮನೆಯಿಂದ ಹೊರಬರಲೂ ಹಿಂದೆ ಮುಂದೆ ನೋಡುವಂತಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿಗೆ ಬಂದರೆ ಕನಿಷ್ಠ ತಾಪಮಾನ 21-20 ಡಿಗ್ರಿಯಷ್ಟಿದೆ.

ಹವಾಮಾನ ವರದಿ ಪ್ರಕಾರ ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳಿದೆ. ಕರಾವಳಿ ಜಿಲ್ಲೆಗಳಿಗೆ ಇಂದೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದೆಲ್ಲಾ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಮತ್ತು ದಿನವಿಡೀ ಮೋಡ ಕವಿದ ವಾತಾವರಣ ಜೊತೆಗೆ ಭಾರೀ ಗಾಳಿ ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ರಾತ್ರಿಯಾದರೂ ಮನೆಸೇರಾದ ಕುಟುಂಬ, ಹುಡುಕಾಟ ನಡೆಸಿದಾಗ ಪತ್ತೆಯಾಗಿದ್ದು, ಕರುಳು ಹಿಂಡುವ ಸ್ಥಿತಿಯಲ್ಲಿ

ಮುಂದಿನ ಸುದ್ದಿ
Show comments