Webdunia - Bharat's app for daily news and videos

Install App

Karnataka Rains: ಇಂದಿನ ಹವಾಮಾನ ವರದಿಯಂತೆ ಈ ಜಿಲ್ಲೆಯವರಿಗೆ ಎಚ್ಚರಿಕೆ ಅಗತ್ಯ

Krishnaveni K
ಶುಕ್ರವಾರ, 13 ಜೂನ್ 2025 (08:36 IST)
ಬೆಂಗಳೂರು: ಕರ್ನಾಟಕದಲ್ಲಿ ಈಗ ಮುಂಗಾರು ಮಳೆ ಮತ್ತೆ ಬಿರುಸಾಗಿದ್ದು, ಇಂದು ಕೆಲವರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಕೆಲವು ಜಿಲ್ಲೆಯವರು ಇಂದು ಎಚ್ಚರಿಕೆ ವಹಿಸಬೇಕಾಗುತ್ತದೆ.

ರಾಜ್ಯಾದ್ಯಂತ ಈಗ ಮತ್ತೆ ಮಳೆಯಾಗುತ್ತಿದೆ. ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ನೆರೆ ಭೀತಿ ಎದುರಾಗಿದೆ. ದಕ್ಷಿಣ ಕನ್ನಡದಿಂದ ತೊಡಗಿ ಕಲಬುರಗಿಯವರೆಗೆ ವಿಪರೀತ ಮಳೆಯಾಗುತ್ತದೆ. ಬೆಂಗಳೂರಿನಲ್ಲೂ ದಿನವಿಡೀ ಮೋಡ ಕವಿದ ವಾತಾವರಣ, ಸಣ್ಣ ಮಳೆಯಾಗುತ್ತಿದೆ.


ಇಂದೂ ಕೂಡಾ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಹೀಗಾಗಿ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು ಜನರು ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ.

ಕರಾವಳಿ ಜಿಲ್ಲೆಗಳು ಮಾತ್ರವಲ್ಲದೆ, ಉತ್ತರದ ಜಿಲ್ಲೆಗಳಲ್ಲೂ ಪ್ರವಾಹ ಸದೃಶ ವಾತಾವರಣವಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಜನರು ಎಚ್ಚರಿಕೆಯಿಂದಿರಬೇಕು ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಈ ಮಳೆಯ ವಾತಾವರಣ ಇನ್ನೂ ನಾಲ್ಕು ದಿನ ಮುಂದುವರಿಯುವ ನಿರೀಕ್ಷೆಯಿದೆ. ಇಂದು ರಾಜ್ಯದ ಗರಿಷ್ಠ ತಾಪಮಾನ 26 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments