Karnataka Rains: ಮುಂಗಾರು ಬಲು ಜೋರು ಎಂದು ಖುಷಿಪಡಬೇಡಿ, ಈ ಹವಾಮಾನ ವರದಿ ನೋಡಿ

Krishnaveni K
ಬುಧವಾರ, 28 ಮೇ 2025 (10:55 IST)
ಬೆಂಗಳೂರು: ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಮೊದಲೇ ಬಂದಿದೆ, ಹೀಗಾಗಿ ಈ ಬಾರಿ ನೀರಿಗೇನೂ ಕೊರತೆಯಾಗದು ಎಂದು ಖುಷಿಯಾಗಿದ್ದರೆ ಈ ಹವಾಮಾನ ವರದಿಯನ್ನು ಒಮ್ಮೆ ನೋಡಿ.

ಹವಾಮಾನ ವರದಿಗಳ ಪ್ರಕಾರ ಈ ಬಾರಿ ಬೇಗನೇ ಮುಂಗಾರು ಆಗಮನವಾಗಲಿದೆ ಎಂದಿತ್ತು. ಅದರಂತೆ ಮೇ ಕೊನೆಯ ವಾರದಲ್ಲೇ ಕೇರಳಕ್ಕೆ ಮುಂಗಾರು ಪ್ರವೇಶಿಸಿ, ದೇಶದಾದ್ಯಂತ ಅಬ್ಬರಿಸುತ್ತಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಂತೂ ಮಳೆ ರುದ್ರ ನರ್ತನ ಮಾಡಿತ್ತು.

ಹೀಗಾಗಿ ಈ ಬಾರಿ ನೆರೆಯುಂಟಾಗಬಹುದು, ಇನ್ನು ಸೆಪ್ಟೆಂಬರ್ ವರೆಗೂ ಎಡೆಬಿಡದೇ ಮಳೆಯಾಗಬಹುದು ಎಂದು ನೀವು ಅಂದುಕೊಂಡಿರಬಹುದು. ಆದರೆ ಹವಾಮಾನ ತಜ್ಞರ ಲೇಟೆಸ್ಟ್ ಮಾಹಿತಿ ಪ್ರಕಾರ ಈ ಬಾರಿ ಮುಂಗಾರು ಬೇಗನೇ ಬಂದಿರುವುದಕ್ಕೆ ಮುಖ್ಯ ಕಾರಣ ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಚಂಡಮಾರುತ.

ಇದರ ಪರಿಣಾಮವಾಗಿ ಎಲ್ಲೆಡೆ ಭಾರೀ ಮಳೆಯಾಗುತ್ತಿದೆ. ಜೂನ್ 2 ರವರೆಗೂ ಮುಂಗಾರು ಮಳೆಯ ಅಬ್ಬರ ಮುಂದುವರಿಯಲಿದೆ. ಆದರೆ ಅದಾದ ಬಳಿಕ 15 ದಿನಗಳಿಗೆ ವರುಣ ಬಿಡುವು ನೀಡಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಸತತವಾಗಿ ಮಳೆಯಾಗುವ ಸಾಧ್ಯತೆಯಿಲ್ಲ. ಸಾಮಾನ್ಯವಾಗಿ ಜೂನ್ 1 ಕ್ಕೆ ಆರಂಭವಾಗುವ ಮುಂಗಾರು ಜೂನ್ ಮಧ್ಯ ಭಾಗದವರೆಗೂ ನಿರಂತರವಾಗಿ ಸುರಿಯುತ್ತದೆ. ಆದರೆ ಈ ಬಾರಿ ಬೇಗನೇ ಮುಂಗಾರು ಆಗಮನವಾಗಿದ್ದು, ಜೂನ್ ಆರಂಭದಲ್ಲಿಯೇ ಬಿಡುವು ಪಡೆದುಕೊಳ್ಳಲಿದೆ. ನಂತರ ಜೂನ್ ಕೊನೆಯ ವಾರದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಡಾ ಮಹೇಂದ್ರ ರೆಡ್ಡಿ ಇವನೆಂಥಾ ಗಂಡ... ಹೆಂಡತಿ ಡಾ ಕೃತಿಕಾ ರೆಡ್ಡಿ ಕೊಂದ ಬಳಿಕ ಏನು ಮಾಡಿದ್ದ ಗೊತ್ತಾ

ಆರ್ ಎಸ್ಎಸ್ ಗೇ ಯಾಕೆ ನಮಗೂ ಪೆರೇಡ್ ಗೆ ಪರ್ಮಿಷನ್ ಕೊಡಿ ಅಂತೀರೋ ಸಂಘಟನೆಗಳಿಗೆ ಕೋರ್ಟ್ ಏನು ಹೇಳುತ್ತೆ

Video: ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗೆ ಆಹುತಿ: 20 ಮಂದಿ ಸಜೀವ ದಹನ

ಅಬ್ಬಾ ಮರಣ ಕ್ಷಣದಲ್ಲಿ ಮನುಷ್ಯನಿಗೆ ಏನೆಲ್ಲಾ ಆಗುತ್ತದೆ: ಈ ವಿದ್ವಾಂಸರು ಏನು ಹೇಳಿದ್ದಾರೆ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments