Webdunia - Bharat's app for daily news and videos

Install App

Karnataka Rains: ಕರ್ನಾಟಕದಲ್ಲಿ ಮಳೆಗಾಲ ಆರಂಭ ಯಾವಾಗ ಇಲ್ಲಿದೆ ಮಾಹಿತಿ

ಕೃಷ್ಣವೇಣಿ ಕೆ
ಬುಧವಾರ, 3 ಜೂನ್ 2026 (09:12 IST)
ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯಾಗುತ್ತಿದೆಯೇ ಹೊರತು ಇನ್ನೂ ಅಧಿಕೃತವಾಗಿ ಮಳೆಗಾಲ ಆರಂಭವಾಗಿಲ್ಲ. ಕರ್ನಾಟಕದಲ್ಲಿ ಮಳೆಗಾಲ ಆರಂಭ ಯಾವಾಗ ಇಲ್ಲಿದೆ ಮಾಹಿತಿ.

ಹವಾಮಾನ ವರದಿಗಳ ಪ್ರಕಾರ ಜೂನ್ 4 ರಂದು ಅಂದರೆ ನಾಳೆ ಕೇರಳಕ್ಕೆ ಮುಂಗಾರಿನ ಆಗಮನವಾಗಲಿದೆ. ವಾಡಿಕೆಯಂತೆ ಮೊದಲು ಕೇರಳ ಕರಾವಳಿಗೆ ಮುಂಗಾರು ಪ್ರವೇಶಿಸಲಿದ್ದು ಬಳಿಕ ಇತರೆ ರಾಜ್ಯಗಳಿಗೆ ಪಸರಿಸಲಿದೆ. ಇದಕ್ಕೆ ಮೊದಲು ಮೇ 26 ಕ್ಕೇ ಮುಂಗಾರು ಪ್ರವೇಶವಾಗಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಆದರೆ ನಿರೀಕ್ಷೆಯಂತೇ ಮಳೆ ಬರಲಿಲ್ಲ.

ಜೂನ್ 4 ರಂದು ನೈಋತ್ಯ ಮುಂಗಾರು ಕೇರಳ ಪ್ರವೇಶ ಮಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕೇರಳದಾದ್ಯಂತ ನಾಳೆ ಭಾರೀ ಮಳೆಯಾಗುವ ಸೂಚನೆಯಿದೆ. ಕೇರಳಕ್ಕೆ ಮುಂಗಾರು ಮೊದಲು ಪ್ರವೇಶ ಮಾಡಿದರೆ ಮುಂದಿನ 2 ದಿನಗಳಲ್ಲೇ ಕರ್ನಾಟಕದಲ್ಲೂ ಮುಂಗಾರು ಮಳೆ ಆರಂಭವಾಗಲಿದೆ.

ಅಂದರೆ ಈ ವಾರಂತ್ಯದ ವೇಳೆಗೆ ಕರ್ನಾಟಕಕ್ಕೂ ಮುಂಗಾರು ಮಳೆ ಪ್ರವೇಶವಾಗುವ ಸಾಧ್ಯತೆಯಿದೆ. ಜೂನ್ 7 ಅಥವಾ 8 ರಂದು ಮುಂಗಾರು ಮಾರುತ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡದ ಭಾಗಗಳಿಗೆ ತಲುಪಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments