Webdunia - Bharat's app for daily news and videos

Install App

ಡಿಕೆಶಿ, ಸಿದ್ದರಾಮಯ್ಯ ಬೇಕಾದಾಗ ನಮ್ಮನ್ನು ಬಳಸಿಕೊಂಡ್ರು: ಹೀಗಂದಿದ್ಯಾಕೆ ಕರವೇ ನಾಯಕ ನಾರಾಯಣ ಗೌಡ?

Webdunia
ಶನಿವಾರ, 30 ಡಿಸೆಂಬರ್ 2023 (09:37 IST)
Photo Courtesy: Twitter
ಬೆಂಗಳೂರು: ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರ ನೇತೃತ್ವದಲ್ಲಿ ಹೋರಾಟ ಕಾವೇರುತ್ತಿದೆ.

ಕನ್ನಡ ಹೋರಾಟಗಾರರು ವಿವಿಧ ಮಾಲ್ ಗಳು, ಅಂಗಡಿಗಳಿಗೆ ದಾಳಿ ನಡೆಸಿ ಕನ್ನಡ ಬೋರ್ಡ್ ಹಾಕುವಂತೆ ಒತ್ತಾಯ ಹೇರಿದ್ದಾರೆ. ಸರ್ಕಾರ ಕೂಡಾ ಫೆಬ್ರವರಿ ಅಂತ್ಯದೊಳಗೆ ಎಲ್ಲಾ ಅಂಗಡಿಗಳು, ಮಾಲ್ ಗಳಲ್ಲಿ ಕನ್ನಡ ಫಲಕ ಕಡ್ಡಾಯ ಆದೇಶ ಹೊರಡಿಸಿದೆ.

ಈ ನಡುವೆ ಪ್ರತಿಭಟನಾ ನಿರತ ಕರವೇ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿ ನಾರಾಯಣ ಗೌಡ ಸೇರಿದಂತೆ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಬಂಧನದ ವೇಳೆ ನಾರಾಯಣ ಗೌಡರು ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಕೆಶಿ, ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು. ಬೇಕಾದಾಗ ನಮ್ಮನ್ನು ಬಳಸಿಕೊಂಡರು. ಈಗ ನಮ್ಮ ಮೇಲೇ ಲಾಠಿ ಪ್ರಹಾರ ಮಾಡುತ್ತೀರಾ? ನಿಮಗೆಲ್ಲಾ ಮುಂದಿನ ಲೋಕಸಭೆ ಚುನಾವಣೆ ವೇಳೆ ತಕ್ಕ ಉತ್ತರ ಕೊಡುತ್ತೇವೆ’ ಎಂದು ನಾರಾಯಣ ಗೌಡರು ನೀಡಿದ ಹೇಳಿಕೆ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು.

ಇದರ ಬೆನ್ನಲ್ಲೇ ಬಿಜೆಪಿ ಬೆಂಬಲಿಗರು ಪ್ರತಿಕ್ರಿಯಿಸಿದ್ದು, ಹಾಗಿದ್ದರೆ ನಾರಾಯಣ ಗೌಡರು ಮತ್ತು ಕರವೇ ಕಾರ್ಯಕರ್ತರನ್ನು ಡಿಕೆಶಿ ಮತ್ತು ಸಿದ್ದರಾಮಯ್ಯನವರು ಈ ಮೊದಲು ಯಾವ ಕೆಲಸಕ್ಕೆ ಬಳಸಿಕೊಂಡರು? ಬಿಜೆಪಿ ಸರ್ಕಾರವಿದ್ದಾಗ ನಂದಿನಿ ಹಾಲಿನ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಕರವೇ ಕೈ ಜೋಡಿಸಿತ್ತು. ಆಗ ಕಾಂಗ್ರೆಸ್ ಕರವೇ ಕಾರ್ಯಕರ್ತರನ್ನು ಛೂ ಬಿಟ್ಟು ಈ ವಿಚಾರವನ್ನು ದೊಡ್ಡದು ಮಾಡಿತೇ ಎಂದು ಪ್ರಶ್ನಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ
Show comments