Select Your Language

Notifications

webdunia
webdunia
webdunia
webdunia

ಕರ್ನಾಟಕ ಸ್ತಬ್ಧಚಿತ್ರ ಗಣರಾಜ್ಯೋತ್ಸವಕ್ಕೆ ಆಯ್ಕೆ

ಕರ್ನಾಟಕ ಸ್ತಬ್ಧಚಿತ್ರ ಗಣರಾಜ್ಯೋತ್ಸವಕ್ಕೆ ಆಯ್ಕೆ
ಬೆಂಗಳೂರು , ಭಾನುವಾರ, 16 ಜನವರಿ 2022 (15:03 IST)
ಗಣರಾಜ್ಯೋತ್ಸವ ದಿನಾಚರಣೆಗೆ ರಾಜ್ಯದ ಸ್ತಬ್ಧ ಚಿತ್ರ ಆಯ್ಕೆ ಆಗಿರುವುದಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ'ಎಂದು ಹೇಳಿದರು.
ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದು ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಟಾರ್ಟ್ಅಪ್ ಹಬ್ ಕರ್ನಾಟಕ ಅಗ್ರಸ್ಥಾನ