ಸಿಎಂ ಬಿಎಸ್ ವೈ ಬದಲಾವಣೆಗೆ ತೆರೆಮರೆಯಲ್ಲೇ ಕಸರತ್ತು?!

Webdunia
ಭಾನುವಾರ, 31 ಮೇ 2020 (09:32 IST)
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಈಗ ಭಿನ್ನಮತ ಸ್ಪೋಟಗೊಂಡಿದೆ. ಅಧಿಕಾರ ಪಡೆಯಲು ಶಾಸಕರು ಒಳಗೊಳಗೇ ಮೀಟಿಂಗ್ ಮಾಡುತ್ತಿದ್ದಾರೆ. ಇವರೆಲ್ಲರ ಅಸಮಾಧಾನದ ಟಾರ್ಗೆಟ್ ಸಹಜವಾಗಿ ಸಿಎಂ ಬಿಎಸ್ ವೈ.


ಈ ಅತೃಪ್ತರ ಗುಂಪು ಈಗ ಸಿಎಂ ಸ್ಥಾನದಲ್ಲಿರುವ ಯಡಿಯೂರಪ್ಪನವರನ್ನೇ ಬದಲಾಯಿಸಲು ಮಸಲತ್ತು ನಡೆಸಿದೆಯಾ ಎಂಬ ಅನುಮಾನ ಮೂಡಿದೆ.

ಕೆಲವು ಮೂಲಗಳ ಪ್ರಕಾರ ಈ ಅಸಮಾಧಾನಿತ ಶಾಸಕರು ಬಿಎಸ್ ವೈ ಬದಲಾಗಿ ಬಸನಗೌಡ ಪಾಟೀಲ್ ಯತ್ನಾಳ್ ಅಥವಾ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರನ್ನು ಸಿಎಂ ಸ್ಥಾನಕ್ಕೇರಿಸಲು ಯೋಜನೆ ರೂಪಿಸಿದೆ ಎನ್ನಲಾಗಿದೆ. ಒಂದು ವೇಳೆ ಈ ಒತ್ತಾಯ ಜಾಸ್ತಿಯಾದರೆ ಮತ್ತೆ ಬಿಜೆಪಿಯಲ್ಲಿ 2008 ರ ಪ್ರಹಸನ ಮರುಕಳಿಸುವ ಸಾಧ‍್ಯತೆಯಿದೆ. 2008 ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತೃಪ್ತ ಶಾಸಕರ ಒತ್ತಡದಿಂದಾಗಿ ಬಿಎಸ್ ವೈ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಯಿತು. ಆ ಬಳಿಕ ಸದಾನಂದ ಗೌಡ, ಜಗದೀಶ್ ಶೆಟ್ಟರ್ ಕೆಲವು ಕಾಲ ಮುಖ್ಯಮಂತ್ರಿಯಾದರು. ಈ ಬಾರಿಯೂ ಯಡಿಯೂರಪ್ಪ ಅಂತಹದ್ದೇ ಸಂದಿಗ್ಧತೆಗೆ ಸಿಲುಕಲಿದ್ದಾರಾ ಅಥವಾ ಬಂಡಾಯಕ್ಕೆ ಮದ್ದು ಹಚ್ಚುತ್ತಾರಾ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments