Webdunia - Bharat's app for daily news and videos

Install App

ಸಿಎಂ ಬಿಎಸ್ ವೈ ಬದಲಾವಣೆಗೆ ತೆರೆಮರೆಯಲ್ಲೇ ಕಸರತ್ತು?!

Webdunia
ಭಾನುವಾರ, 31 ಮೇ 2020 (09:32 IST)
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಈಗ ಭಿನ್ನಮತ ಸ್ಪೋಟಗೊಂಡಿದೆ. ಅಧಿಕಾರ ಪಡೆಯಲು ಶಾಸಕರು ಒಳಗೊಳಗೇ ಮೀಟಿಂಗ್ ಮಾಡುತ್ತಿದ್ದಾರೆ. ಇವರೆಲ್ಲರ ಅಸಮಾಧಾನದ ಟಾರ್ಗೆಟ್ ಸಹಜವಾಗಿ ಸಿಎಂ ಬಿಎಸ್ ವೈ.


ಈ ಅತೃಪ್ತರ ಗುಂಪು ಈಗ ಸಿಎಂ ಸ್ಥಾನದಲ್ಲಿರುವ ಯಡಿಯೂರಪ್ಪನವರನ್ನೇ ಬದಲಾಯಿಸಲು ಮಸಲತ್ತು ನಡೆಸಿದೆಯಾ ಎಂಬ ಅನುಮಾನ ಮೂಡಿದೆ.

ಕೆಲವು ಮೂಲಗಳ ಪ್ರಕಾರ ಈ ಅಸಮಾಧಾನಿತ ಶಾಸಕರು ಬಿಎಸ್ ವೈ ಬದಲಾಗಿ ಬಸನಗೌಡ ಪಾಟೀಲ್ ಯತ್ನಾಳ್ ಅಥವಾ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರನ್ನು ಸಿಎಂ ಸ್ಥಾನಕ್ಕೇರಿಸಲು ಯೋಜನೆ ರೂಪಿಸಿದೆ ಎನ್ನಲಾಗಿದೆ. ಒಂದು ವೇಳೆ ಈ ಒತ್ತಾಯ ಜಾಸ್ತಿಯಾದರೆ ಮತ್ತೆ ಬಿಜೆಪಿಯಲ್ಲಿ 2008 ರ ಪ್ರಹಸನ ಮರುಕಳಿಸುವ ಸಾಧ‍್ಯತೆಯಿದೆ. 2008 ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತೃಪ್ತ ಶಾಸಕರ ಒತ್ತಡದಿಂದಾಗಿ ಬಿಎಸ್ ವೈ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಯಿತು. ಆ ಬಳಿಕ ಸದಾನಂದ ಗೌಡ, ಜಗದೀಶ್ ಶೆಟ್ಟರ್ ಕೆಲವು ಕಾಲ ಮುಖ್ಯಮಂತ್ರಿಯಾದರು. ಈ ಬಾರಿಯೂ ಯಡಿಯೂರಪ್ಪ ಅಂತಹದ್ದೇ ಸಂದಿಗ್ಧತೆಗೆ ಸಿಲುಕಲಿದ್ದಾರಾ ಅಥವಾ ಬಂಡಾಯಕ್ಕೆ ಮದ್ದು ಹಚ್ಚುತ್ತಾರಾ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments