Webdunia - Bharat's app for daily news and videos

Install App

ಮೊಟ್ಟೆ ಬೆಲೆ ಏರಿಕೆ: ಶಾಲಾ ಮಕ್ಕಳಿಗೆ ಮೊಟ್ಟೆ ಒದಗಿಸಲು ಶಿಕ್ಷಕರಿಗೆ ಬರೆ

Krishnaveni K
ಗುರುವಾರ, 2 ಜನವರಿ 2025 (11:31 IST)
ಬೆಂಗಳೂರು: ರಾಜ್ಯದಲ್ಲಿ ಮೊಟ್ಟೆ ದರ ಏರಿಕೆಯಾಗಿರುವುದು ಶಿಕ್ಷಕರಿಗೆ ಬರೆ ಹಾಕಿದಂತಾಗಿದೆ. ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬೇಕೆಂದರೆ ಶಿಕ್ಷಕರೇ ಹಣ ನೀಡಬೇಕಾದ ಪರಿಸ್ಥಿತಿ ಎದುರಾಗಿದೆ.

ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಮೊಟ್ಟೆ ಭಾಗ್ಯ ಯೋಜನೆ ಜಾರಿಗೊಳಿಸಿದೆ. ಮಕ್ಕಳಿಗೆ ಮೊಟ್ಟೆ ಖರೀದಿಸಲು ನಿರ್ದಿಷ್ಟ ಹಣವನ್ನೂ ಶಾಲೆಗೆ ನಿಡಲಾಗುತ್ತಿದೆ. ಆದರೆ ಈಗ ಮೊಟ್ಟೆಗೆ ಬೆಲೆ ಏರಿಕೆಯಾಗಿದೆ.

ಆದರೆ ರಾಜ್ಯ ಸರ್ಕಾರದಿಂದ ಬರುವ ಹಣ ಮಾತ್ರ ಏರಿಕೆಯಾಗಿಲ್ಲ. ಹೀಗಾಗಿ ಮಕ್ಕಳಿಗೆ ಮೊಟ್ಟೆ ಖರಿದಿಸಿಕೊಡಲು ಶಾಲೆಯ ಮುಖ್ಯೋಪಾದ್ಯರೇ ತಮ್ಮ ಸ್ವಂತ ಜೇಬಿನಿಂದ ದುಡ್ಡು ಹಾಕಬೇಕಾಗುತ್ತಿದೆ. ಇದರ ವಿರುದ್ಧ ಈಗ ಶಿಕ್ಷಕರಿಂದ ಅಸಮಾಧಾನ ಕೇಳಿಬಂದಿದೆ.

ಈ ಹಿಂದೆ ಮೊಟ್ಟೆಯ ದರ 5.30 ರೂ. ಇತ್ತು. ಈಗ ಇದು 6 ರೂ. ನಿಂದ 6.80 ರೂ.ಗೆ ಏರಿಕೆಯಾಗಿದೆ. ಶಿಕ್ಷಣ ಇಲಾಖೆ ಪ್ರತೀ ಮೊಟ್ಟೆಗೆ 6 ರೂ. ನಿಗದಿಪಡಿಸಿದೆ. ಹೀಗಾಗಿ ಉಳಿದ ಹಣವನ್ನು ಶಿಕ್ಷಕರೇ ಭರಿಸಬೇಕಾಗುತ್ತಿದೆ. ಜೊತೆಗೆ ಮೊಟ್ಟೆ ಬೇಯಿಸುವ ವ್ಯವಸ್ಥೆ ಮಾಡಲೂ ಖರ್ಚಾಗುತ್ತಿದೆ. ಇದನ್ನು ಶಿಕ್ಷಕರೇ ಭರಿಸಬೇಕು. ಹೀಗಾಗಿ ಅನಿವಾರ್ಯವಾಗಿ ಕೆಲವು ಶಾಲೆಗಳು ದಾನಿಗಳ ಮೊರೆ ಹೋಗುತ್ತಿದ್ದಾರೆ. ದಾನಿಗಳು ಸಿಗದೇ ಇದ್ದರೆ ಶಿಕ್ಷಕರೇ ಈ ಹೊರೆ ಹೊರಬೇಕಾಗುತ್ತಿದೆ. ಸರ್ಕಾರ ಜಾರಿಗೊಳಿಸಿದ ಯೋಜನೆಯ ಜವಾಬ್ಧಾರಿಯನ್ನು ಶಿಕ್ಷಕರು ಹೊರಬೇಕಾಗಿರುವುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments