Select Your Language

Notifications

webdunia
webdunia
webdunia
webdunia

ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಯಾವ ಜಿಲ್ಲೆ ಪ್ರಥಮ, ಅನುತ್ತೀರ್ಣರಾದವರಿಗೂ ಗುಡ್ ನ್ಯೂಸ್

Madhu Bangarappa
ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಶೇ. ರಷ್ಟು ಫಲಿತಾಂಶ ಬಂದಿದೆ. ಇನ್ನು ಅನುತ್ತೀರ್ಣರಾದವರಿಗೆ ಇನ್ನು ಎರಡು ಅವಕಾಶವಿದ್ದು ಭಯ ಬೇಡ.

ನೇರವಾಗಿ ವೆಬ್ ಸೈಟ್ ಮುಖಾಂತರವೇ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಒಟ್ಟು ಮೂವರಿಗೆ 625 ಕ್ಕೆ 625 ಅಂಕಗಳು ಬಂದಿವೆ. ಹಾಸನದ ಜಾನವಿ, ಉತ್ಸವ ಪಾಟೀಲ್, ಬೆಳಗಾವಿ ರೂಪಾ ಚನಗೌಡ ಪಾಟೀಲ 625 ಅಂಕ ಪಡೆದ ವಿದ್ಯಾರ್ಥಿಗಳು.

ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಘೋಷಣೆ ಮಾಡಿದ್ದಾರೆ. ‘ಈ ಬಾರಿ ದಾಖಲೆಯ 94.1 ಶೇ. ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅತ್ಯುತ್ತಮ ಫಲಿತಾಂಶ ನೀಡಿದ ವಿದ್ಯಾರ್ಥಿಗಳು, ಸಹಕಾರ ನೀಡಿದ ಪೋಷಕರಿಗೂ ಧನ್ಯವಾದ ಸಲ್ಲಿಸುತ್ತೇನೆ’ ಎಂದಿದ್ದಾರೆ.

ಇದೇ ಮೊದಲ ಬಾರಿಗೆ ಡಿಜಿ ಲಾಕರ್ ನಲ್ಲಿ ಅಂಕಪಟ್ಟಿ ನೀಡುವ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ 7,75,999 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ ಶೇ.99 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 7,24,794 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಸಿಕ್ಕಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನದಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡಿನಲ್ಲಿ ಸಕ್ಸಸ್ ಆಗುತ್ತಾ ದಳಪತಿ ವಿಜಯ್ ಪಕ್ಷ