Webdunia - Bharat's app for daily news and videos

Install App

ಸಾಲುತ್ತಿಲ್ಲ ದುಡ್ಡು ಎಂದು 40000 ಕೋಟಿ ಸಾಲ ಪಡೆಯಲು ಮುಂದಾದ ರಾಜ್ಯ ಸರ್ಕಾರ

Krishnaveni K
ಗುರುವಾರ, 7 ನವೆಂಬರ್ 2024 (11:13 IST)
ಬೆಂಗಳೂರು: ರಾಜ್ಯದ  ವಿವಿಧ ಯೋಜನೆಗಳಿಗೆ ಹಣ ಹೊಂದಿಸಲು ಹಣಕಾಸಿನ ಕೊರತೆ ಎದುರಾಗಿದ್ದು ಇದನ್ನು ಸರಿದೂಗಿಸಲು ರಾಜ್ಯ ಸರ್ಕಾರ ಬರೋಬ್ಬರಿ 40000 ಕೋಟಿ ರೂ. ಸಾಲ ಪಡೆಯಲು ಮುಂದಾಗಿದೆ.

ಇದಕ್ಕೆ ಆರ್ ಬಿಐ ಕೂಡಾ ಅನುಮತಿ ನೀಡಿದೆ. ಇದರೊಂದಿಗೆ ರಾಜ್ಯದ ಒಟ್ಟಾರೆ ಸಾಲದ ಮೊತ್ತ 5.53 ಲಕ್ಷ ಕೋಟಿ ರೂ. ತಲುಪಲಿದೆ. ಇತ್ತೀಚೆಗೆ ಹಣಕಾಸು ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡಸಿದ್ದಾಗ ವಿತ್ತೀಯ ಕೊರತೆ ಕಂಡುಬಂದಿದ್ದು, ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದರು.

ಇದೀಗ ನವಂಬರ್ ಮತ್ತು ಡಿಸೆಂಬರ್ ಅವಧಿಯಲ್ಲಿ ತಲಾ 20 ಸಾವಿರ ಕೋಟಿಯಂತೆ 40 ಸಾವಿರ ಕೋಟಿ ರೂ. ಸಾಲ ಪಡೆಯಲು ಆರ್ ಬಿಐನಿಂದ ರಾಜ್ಯ ಸರ್ಕಾರ ಅನುಮತಿ ಪಡೆದುಕೊಂಡಿದೆ. ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರದಿಂದ 6855 ಕೋಟಿ ರೂ ಮತ್ತು ಮುಕ್ತ ಮಾರುಕಟ್ಟೆಯಿಂದ 96,840 ಕೋಟಿ ರೂ. ಸೇರಿದಂತೆ ಒಟ್ಟು 1.05 ಲಕ್ಷ ಕೋಟಿ ರೂ. ಸಾಲ ಪಡೆಯಲು ರಾಜ್ಯ ಸರ್ಕಾರ ಲೆಕ್ಕಾಚಾರ ಹಾಕಿತ್ತು.

ಸೆಪ್ಟೆಂಬರ್ ತಿಂಗಳ ಅವಧಿಯವರೆಗೆ 4 ಸಾವಿರ ಕೋಟಿ ಸಾರ್ವಜನಿಕ ಸಾಲ ಮತ್ತು ಮುಕ್ತ ಮಾರುಕಟ್ಟೆಯಲ್ಲಿ 3 ಸಾವಿರ ಕೋಟಿ ರೂ. ಸಾಲ ಮಾಡಿಕೊಂಡಿದೆ. ಅಕ್ಟೋಬರ್ ತಿಂಗಳಲ್ಲಿ ಮುಕ್ತ ಮಾರುಕಟ್ಟೆಯಿಂದ 20 ಸಾವಿರ ಕೋಟಿ ರೂ. ಅಭಿವೃದ್ಧಿ ಸಾಲ ಪಡೆಯಲು ಆರ್ ಬಿಐನಿಂದ ಅನುಮತಿ ಪಡೆಯಲಾಗಿತ್ತು. ಇದೀಗ ನವಂಬರ್ ಮತ್ತು ಡಿಸೆಂಬರ್ ಅವಧಿಯಲ್ಲಿ ತಲಾ 20 ಸಾವಿರ ಕೋಟಿ ರೂ.ಗಳಂತೆ 40 ಸಾವಿರ ಕೋಟಿ ರೂ. ಸಾಲ ಪಡೆಯಲು ಮುಂದಾಗಿದೆ. ಎಲ್ಲಾ ಒಟ್ಟು ಸೇರಿ ಡಿಸೆಂಬರ್ ಅಂತ್ಯಕ್ಕೆ 67 ಸಾವಿರ ಕೋಟಿ ರೂ. ಸಾಲ ಪಡೆದಂತಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments