Webdunia - Bharat's app for daily news and videos

Install App

ಕರ್ನಾಟಕದ ಮೂವರು ಹುತಾತ್ಮ ಯೋಧರ ಕೌಟುಂಬಿಕ ಹಿನ್ನಲೆ ಕೇಳಿದ್ರೆ ಕಣ್ಣೀರು ತರಿಸುತ್ತದೆ

Krishnaveni K
ಗುರುವಾರ, 26 ಡಿಸೆಂಬರ್ 2024 (10:35 IST)
ಜಮ್ಮು ಕಾಶ್ಮೀರ: ಕರ್ನಾಟಕ ಮೂಲದ ಮೂವರು ಯೋಧರು ನಿನ್ನೆ ಹುತಾತ್ಮರಾದ ದುಃಖದ ವಿಚಾರ ಬಂದೆರಗಿತ್ತು. ಈ ಮೂವರೂ ಯೋಧರ ಕುಟುಂಬದ ಹಿನ್ನಲೆ ಕೇಳಿದರೆ ನಿಜಕ್ಕೂ ಕಣ್ಣೀರು ಬರುತ್ತದೆ.

ಜಮ್ಮು ಕಾಶ್ಮೀರದಲ್ಲಿ ನಡೆದ ಅಪಘಾತದಲ್ಲಿ ರಾಜ್ಯದ ಮೂವರು ಯೋಧರು ಹುತಾತ್ಮರಾಗಿದ್ದರು. ಹುತಾತ್ಮ ಯೋಧರ ಮೃತದೇಹಗಳು ತವರಿಗೆ ಬಂದಿದೆ. ಇಂದು ಸಕಲ ಸರ್ಕಾರೀ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಕರ್ನಾಟಕದ 44 ವರ್ಷದ ಸುಬೇದಾರ್ ದಯಾನಂದ್ ತ್ರಿಕ್ಕಣ್ಣನವರ್ ಬೆಳಗಾವಿಯವರು. ಅವರೇ ತಂಡವನ್ನು ಮನ್ನಡೆಸುತ್ತಿದ್ದರು. ಕಳೆದ 25 ವರ್ಷಗಳಿಂದ ಅವರು ಸೇನೆಯಲ್ಲಿದ್ದಾರೆ. ಇನ್ನೇನು ಒಂದು ವರ್ಷದಲ್ಲಿ ನಿವೃತ್ತಿಯಾಗಿ ತಮ್ಮ ಪತ್ನಿ, ಇಬ್ಬರು ಮಕ್ಕಳೊಂದಿಗೆ ಸುಖ ಜೀವನ ಮಾಡುವ ಕನಸು ಕಂಡಿದ್ದರು. ವಿಪರ್ಯಾಸವೆಂದರೆ ಈಗಲೇ ಪ್ರಾಣ ಕಳೆದುಕೊಳ್ಳಬೇಕಾಯಿತು.

ಹುತಾತ್ಮರಾದ ಇನ್ನೊಬ್ಬ ಯೋಧನೆಂದರೆ ಬಾಗಲಕೋಟೆಯ ಮಹೇಶ್ ಮಾರಿಗೊಂಡ. ಅವರಿಗೆ ಇನ್ನೂ 25 ವರ್ಷ. ಮೂರು ವರ್ಷಗಳ ಹಿಂದಷ್ಟೇ ಮದುವೆಯಾಗಿತ್ತು. ಇನ್ನೂ ಮಕ್ಕಳಾಗಿರಲಿಲ್ಲ. ಇದೀಗ ಜೀವನದ ಸುಖ ಅನುಭವಿಸುವ ಮೊದಲೇ ಪತ್ನಿ, ಸಹೋದರ, ಸಹೋದರಿ ಹಾಗೂ ತಾಯಿಯನ್ನು ಅಗಲಿದ್ದಾರೆ.

ಹುತಾತ್ಮರಾದ ಇನ್ನೊಬ್ಬ ಯೋಧ ಕುಂದಾಪುರ ಮೂಲದ ಅನೂಪ್ ಪೂಜಾರಿ. 13 ವರ್ಷಗಳಿಂದ ಸೇನೆಯಲ್ಲಿರುವ ಅನೂಪ್ ಗೆ 33 ವರ್ಷ. ಅವರಿಗೆ ಕೇವಲ ಒಂದೂವರೆ ವರ್ಷದ ಮಗಳಿದ್ದಾಳೆ. ಇದೀಗ ಪತ್ನಿ, ಮಗಳು, ತಾಯಿ, ಇಬ್ಬರು ಅಕ್ಕಂದಿರನ್ನು ತಬ್ಬಲಿಯಾಗಿ ಮಾಡಿ ಹೋಗಿದ್ದಾರೆ. ಇದೀಗ ಮೂವರೂ ಯೋಧರೂ ದೇಶ ಸೇವೆಯ ಸಂದರ್ಭದಲ್ಲಿ ಹುತಾತ್ಮರಾಗಿದ್ದಾರೆ. ಅವರ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments