ಸೋಮವಾರದಿಂದ ಹಾಫ್ ಅನ್ ಲಾಕ್

Webdunia
ಶುಕ್ರವಾರ, 11 ಜೂನ್ 2021 (08:53 IST)
ಬೆಂಗಳೂರು: ಸೋಮವಾರದಿಂದ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಕೆಲವೊಂದು ಕ್ಷೇತ್ರಕ್ಕೆ ರಾಜ್ಯ ಸರ್ಕಾರ ವಿನಾಯ್ತಿ ನೀಡಿದೆ.


ಕೊರೋನಾ ಅಧಿಕ ಸಂಖ್ಯೆಯಲ್ಲಿರುವ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಯಲಿದೆ. ಉಳಿದ ಜಿಲ್ಲೆಗಳಲ್ಲಿ ಕೆಲವೊಂದು ಬದಲಾವಣೆ ಮಾಡಿರುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಜೂನ್ 14 ರಿಂದ 21 ರವರೆಗೆ ಹೊಸ ನಿಯಮಗಳು ಜಾರಿಯಲ್ಲಿರಲಿವೆ. ಅದಾದ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.  ಎಲ್ಲಾ ಕಾರ್ಖಾನೆಗಳಲ್ಲಿ ಶೇ.50 ಮತ್ತು ಗಾರ್ಮೆಂಟ್ಸ್ ಗಳಲ್ಲಿ ಶೇ.30 ಸಿಬ್ಬಂದಿಗೆ ಕಾರ್ಯನಿರ್ವಹಿಸಲು ಅವಕಾಶ. ಕಟ್ಟಡ ಕಾಮಗಾರಿ, ಅದಕ್ಕೆ ಸಂಬಂಧಿಸಿದ ಅಂಗಡಿಗಳನ್ನು ತೆರೆಯಲು ಅವಕಾಶವಿದ್ದು, ಕೃಷಿ ಚಟುವಟಿಕೆಗಳಿಗೂ ಸಂಪೂರ್ಣ ವಿನಾಯ್ತಿ ನೀಡಲಾಗಿದೆ. ಆದರೆ ಜೂನ್ 14 ರ ನಂತರವೂ ಬಸ್ ಸಂಚಾರವಿರಲ್ಲ.  ಆದರೆ ಆಟೋಗಳಲ್ಲಿ ಇಬ್ಬರು ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ. ಪಾರ್ಕ್ ಗಳನ್ನು ತೆರೆಯಲು ಬೆಳಿಗ್ಗೆ 5 ರಿಂದ 10 ರವರೆಗೆ ಅನುಮತಿ.

ನೈಟ್ ಕರ್ಫ್ಯೂ ಜೊತೆಗೆ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ಹಾಲು, ದಿನಸಿ ಖರೀದಿಗೆ ನಿರ್ಬಂಧ ಸಡಿಲಿಸಲಾಗಿದೆ. ಮಧ್ಯಾಹ್ನ 2 ರವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ಯುಎಸ್ ದಾಳಿಗೆ ಮಧ್ಯಪ್ರಾಚ್ಯದ ಕಡೆ ಇರಾನ್ ಟಾರ್ಗೆಟ್‌: ಹೊತ್ತಿ ಉರಿದ ಬೆಹೆರೇನ್‌ ಹೊಟೇಲ್‌, ದುಬೈ ಏರ್‌ಪೋರ್ಟ್‌ನ ಭಯಾನಕ, Video

ದಾಳಿಯಲ್ಲಿ ಖಮೇನಿ ಸೇರಿ ಮಗಳು, ಅಳಿಯ ಕೂಡಾ ಸಾವು, ಇರಾನ್‌ನ ಹಲವೆಡೆ ಸಂಭ್ರಮಾಚರಣೆ, Video

Karnataka Weather: ಬಿಸಿಲ ತಾಪಕ್ಕೆ ತತ್ತರಿಸಿರುವ ಜನತೆ ಮಳೆಯನ್ನೂ ನಿರೀಕ್ಷಿಸಬಹುದಾ

ಇರಾನ್‌ನ ಸುಪ್ರೀಂ ನಾಯಕ ಅಲ್ ಖಮೇನಿ ಸಾವು, ಅನೇಕ ದೇಶದ ಜನರಿಗೆ ನ್ಯಾಯ ಎಂದ ಟ್ರಂಪ್‌

ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ-ಯುಎಸ್ ದಾಳಿ, ಸಾವನ್ನಪ್ಪಿದವರ ಸಂಖ್ಯೆ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments