Webdunia - Bharat's app for daily news and videos

Install App

Karnataka Weather: ಇಂದಿನಿಂದ ರಾಜ್ಯದ ಈ ಭಾಗದ ಹವಾಮಾನದಲ್ಲಿ ಭಾರೀ ಬದಲಾವಣೆ

Sampriya
ಭಾನುವಾರ, 1 ಜೂನ್ 2025 (10:49 IST)
ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಬೇಗನೆ ಪ್ರವೇಶಿಸಿದ್ದು, ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಕಳೆದ ತಿಂಗಳು ಬಿಸಿಲ ಬೇಗೆಯಿಂದ ಸುಸ್ತಾಗಿದ್ದ ಮಂದಿಗೆ, ಇದೀಗ ವರುಣ ತಂಪೆರೆದಿದ್ದಾನೆ.

ಇನ್ನೂ ಕರಾವಳಿ ಭಾಗದಲ್ಲಿ ಸುರಿದ ಮಳೆಗೆ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು.  ಹಲವೆಡೆ ಮನೆಯೊಳಗೆ ನೀರು ನುಗ್ಗಿ ಪರದಾಡಿದ ವರದಿಗಳು, ಗುಡ್ಡ ಕುಸಿತದಿಂದ ಪ್ರಾಣ ಹಾನಿಯಾಗಿದೆ. ಕರಾವಳಿ ಭಾಗದಲ್ಲಿ ಶನಿವಾರ ಮಧ್ಯಾಹ್ನದಿಂದ ಮಳೆ ಸ್ವಲ್ಪ ಬಿಡುವು ನೀಡಿದೆ.

ಜೂನ್ 1 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿದೆ. ಅಂದು ದಕ್ಷಿಣ ಕನ್ನಡ ಮಾತ್ರ ಹಳದಿ ಅಲರ್ಟ್‌ನಲ್ಲಿದೆ, ಆದರೆ ಇತರ ಜಿಲ್ಲೆಗಳಿಗೆ ಯಾವುದೇ ಎಚ್ಚರಿಕೆಗಳನ್ನು ನೀಡಲಾಗಿಲ್ಲ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ,   5 ಜಿಲ್ಲೆಗಳಲ್ಲಿ ಜೂನ್ 31ರ ವರೆಗೆ ಮಳೆಯ ತೀವ್ರತೆ ಹಿನ್ನೆಲೆ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ.

ಭಾರತದ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ತೀವ್ರ ಮುಂಗಾರು ಚಟುವಟಿಕೆ ಪ್ರದೇಶವನ್ನು ಹಿಡಿದಿಟ್ಟುಕೊಳ್ಳುತ್ತದೆ. ಪೀಡಿತ ಜಿಲ್ಲೆಗಳಲ್ಲಿ ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಸೇರಿ.

ಹೆಚ್ಚುವರಿಯಾಗಿ, ಉತ್ತರ ಕನ್ನಡ ಮತ್ತು ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ, ಸಾಧಾರಣ ಮಳೆ ಮತ್ತು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments