ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸಂಜೆ ಕೆಲವು ಕಡೆ ಮೋಡ ಕವಿದ ವಾತಾವರಣವಿತ್ತು. ಇಂದು ಹವಾಮಾನದಲ್ಲಿ ಏನು ಬದಲಾವಣೆಯಿರಲಿದೆ, ಇಲ್ಲಿದೆ ಇಂದಿನ ಹವಾಮಾನ ವರದಿ.
ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದೆ. ಇದರ ನಡುವೆ ಕೇರಳದಲ್ಲಿ ವಾರಂತ್ಯಕ್ಕೆ ಮಳೆಯ ಸೂಚನೆಯೂ ಇದೆ. ಇದರ ಬೆನ್ನಲ್ಲೇ ಕರಾವಳಿ ಜಿಲ್ಲೆಗಳಲ್ಲೂ ನಿನ್ನೆ ಕೊಂಚ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಉಳಿದ ಜಿಲ್ಲೆಗಳಲ್ಲಿ ವಿಪರೀತ ಬಿಸಿಲಿತ್ತು.
ಇಂದು ಬೆಳಿಗ್ಗೆ ಮೋಡ ಕವಿದ ವಾತಾವರಣವಿತ್ತು. ಆದರೆ ಹಗಲು ಬಹುತೇಕ ಜಿಲ್ಲೆಗಳಲ್ಲಿ ಹಗಲು ವಿಪರೀತ ಬಿಸಿಲು ಕಂಡುಬರಲಿದೆ. ಬೆಳಿಗ್ಗಿನ ಜಾವ ಸಣ್ಣ ಮಟ್ಟಿಗೆ ಚಳಿಯೂ ಕಂಡುಬರುವುದು. ಇಂದು ರಾಜ್ಯದ ಗರಿಷ್ಠ ತಾಪಮಾನ 31 ಡಿಗ್ರಿಯಷ್ಟು ಏರಿಕೆಯಾಗಲಿದೆ. ಕನಿಷ್ಠ ತಾಪಮಾನ 17 ಡಿಗ್ರಿಯಷ್ಟು ಇರಲಿದೆ.