Webdunia - Bharat's app for daily news and videos

Install App

Karnataka Weather: ಇಂದು ಚಳಿಯ ಜೊತೆ ಕೆಲವೆಡೆ ಮೋಡ ಕವಿದ ವಾತಾವರಣ

Krishnaveni K
ಮಂಗಳವಾರ, 6 ಜನವರಿ 2026 (08:50 IST)
ಬೆಂಗಳೂರು: ರಾಜ್ಯದಲ್ಲಿ ಈಗ ಹಲವೆಡೆ ವಿಪರೀತ ಚಳಿಯಾಗಿದ್ದರೆ ಮತ್ತೆ ಕೆಲವು ಕಡೆ ತುಂತುರು ಮಳೆಯೂ ಕಂಡುಬರುತ್ತಿದೆ. ಇಂದೂ ಕೂಡಾ ಚಳಿಯ ಜೊತೆಗೆ ಮೋಡ ಕವಿದ ವಾತಾವರಣ ನಿರೀಕ್ಷಿಸಲಾಗಿದೆ.

ವಾರಂತ್ಯದಲ್ಲಿ ವಿಪರೀತ ಚಳಿ, ಮೋಡ ಕವಿದ ವಾತಾವರಣವಿತ್ತು. ಇಂದೂ ಬೆಳಿಗ್ಗೆ ಮಂಜು ಮುಸುಕಿದ ವಾತಾವರಣವಿತ್ತು. ಇಂದು ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿರಲಿದೆ. ಗರಿಷ್ಠ ತಾಪಮಾನ 26 ಡಿಗ್ರಿಯಷ್ಟಿರಲಿದೆ.

ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಯಷ್ಟಿರಲಿದ್ದು ವಿಪರೀತ ಚಳಿ ಕಂಡುಬರುವುದು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲೂ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿರುವ ಸಾಧ್ಯತೆಯಿದೆ. ಬೀದರ್ ನಲ್ಲೂ ತಾಪಮಾನ 14 ಡಿಗ್ರಿಗೆ ಇಳಿಯಲಿದ್ದು ವಿಪರೀತ ಚಳಿ ಕಂಡುಬರುವುದು. ಉಳಿದ ಜಿಲ್ಲೆಗಳಲ್ಲಿ ಸರಾಸರಿ ಕನಿಷ್ಠ ತಾಪಮಾನ 15-17 ಡಿಗ್ರಿಯವರೆಗೆ ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments