Select Your Language

Notifications

webdunia
webdunia
webdunia
webdunia

Karnataka Weather: ಸೈಕ್ಲೋನ್ ಇಫೆಕ್ಟ್, ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆ

Bangalore Rains

Krishnaveni K

ಬೆಂಗಳೂರು , ಸೋಮವಾರ, 24 ಫೆಬ್ರವರಿ 2025 (09:06 IST)
ಬೆಂಗಳೂರು: ಕರ್ನಾಟಕದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು ಈ ದಿನ ಮಳೆ ಸಾಧ್ಯತೆಯಿದೆಯೇ ಹವಾಮಾನ ಹೇಗಿರಲಿದೆ ಎಂಬ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ ನೋಡಿ. ಸೈಕ್ಲೋನ್ ಇಫೆಕ್ಟ್ ನಿಂದ ರಾಜ್ಯದ ಈ ಭಾಗದಲ್ಲಿ ಮಳೆಯಾಗಲಿದೆ.

ರಾಜ್ಯದಲ್ಲಿ ಈಗ ಬಿಸಿಲಿನ ಝಳ ಹೆಚ್ಚಾಗಿದ್ದು ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ಕಳೆದ ವಾರವಿಡೀ ಗರಿಷ್ಠ ತಾಪಮಾನ 32-25 ಡಿಗ್ರಿಯಷ್ಟಿತ್ತು. ಆದರೆ ದಕ್ಷಿಣ ಕನ್ನಡದ ಕೆಲವು ಕಡೆ ಮಾತ್ರ ಆಗಾಗ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಬಂಗಾಳ ಕೊಲ್ಲಿಯಲ್ಲಿ ಚಂಡುಮಾರುತ ರೂಪುಗೊಳ್ಳುತ್ತಿದ್ದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಉಳಿದ ಭಾಗಗಳಲ್ಲಿ ಈ ವಾರವೂ ಹವಾಮಾನ ಕಳೆದ ವಾರದಂತೆಯೇ ಮುಂದುವರಿಯಲಿದೆ. ರಾಜ್ಯದ ಬಹುತೇಕ ಒಣ ಹವೆ, ಹಗಲು ವಿಪರೀತ ಬಿಸಿಲಿನ ವಾತಾವರಣ ಕಂಡುಬರುವುದು. ಹವಾಮಾನ ವರದಿ ಪ್ರಕಾರ ಈ ವಾರ ಮಳೆ ಸಾಧ್ಯತೆ ಕಡಿಮೆ.

ಈ ವಾರ ತಾಪಮಾನ 35 ಡಿಗ್ರಿಯವರೆಗೂ ಏರಿಕೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಬಿಸಿಲಿನ ವಾತಾವರಣವಿರಲಿದೆ. ಹಾಗಿದ್ದರೂ ಬುಧವಾರದಿಂದ ಕೆಲವು ಕಡೆ ಸಣ್ಣ ಪ್ರಮಾಣದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದೀತು. ಅದು ಬಿಟ್ಟರೆ ತಾಪಮಾನ ಇನ್ನಷ್ಟು ಏರಿಕೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿಗಳೇ, ಇಂದೇ ನಿಮ್ಮ ಖಾತೆ ಚೆಕ್ ಮಾಡಿ