Webdunia - Bharat's app for daily news and videos

Install App

Karnataka Weather: ಸೈಕ್ಲೋನ್ ಇಫೆಕ್ಟ್, ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆ

Krishnaveni K
ಸೋಮವಾರ, 24 ಫೆಬ್ರವರಿ 2025 (09:06 IST)
ಬೆಂಗಳೂರು: ಕರ್ನಾಟಕದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು ಈ ದಿನ ಮಳೆ ಸಾಧ್ಯತೆಯಿದೆಯೇ ಹವಾಮಾನ ಹೇಗಿರಲಿದೆ ಎಂಬ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ ನೋಡಿ. ಸೈಕ್ಲೋನ್ ಇಫೆಕ್ಟ್ ನಿಂದ ರಾಜ್ಯದ ಈ ಭಾಗದಲ್ಲಿ ಮಳೆಯಾಗಲಿದೆ.

ರಾಜ್ಯದಲ್ಲಿ ಈಗ ಬಿಸಿಲಿನ ಝಳ ಹೆಚ್ಚಾಗಿದ್ದು ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ಕಳೆದ ವಾರವಿಡೀ ಗರಿಷ್ಠ ತಾಪಮಾನ 32-25 ಡಿಗ್ರಿಯಷ್ಟಿತ್ತು. ಆದರೆ ದಕ್ಷಿಣ ಕನ್ನಡದ ಕೆಲವು ಕಡೆ ಮಾತ್ರ ಆಗಾಗ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಬಂಗಾಳ ಕೊಲ್ಲಿಯಲ್ಲಿ ಚಂಡುಮಾರುತ ರೂಪುಗೊಳ್ಳುತ್ತಿದ್ದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಉಳಿದ ಭಾಗಗಳಲ್ಲಿ ಈ ವಾರವೂ ಹವಾಮಾನ ಕಳೆದ ವಾರದಂತೆಯೇ ಮುಂದುವರಿಯಲಿದೆ. ರಾಜ್ಯದ ಬಹುತೇಕ ಒಣ ಹವೆ, ಹಗಲು ವಿಪರೀತ ಬಿಸಿಲಿನ ವಾತಾವರಣ ಕಂಡುಬರುವುದು. ಹವಾಮಾನ ವರದಿ ಪ್ರಕಾರ ಈ ವಾರ ಮಳೆ ಸಾಧ್ಯತೆ ಕಡಿಮೆ.

ಈ ವಾರ ತಾಪಮಾನ 35 ಡಿಗ್ರಿಯವರೆಗೂ ಏರಿಕೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಬಿಸಿಲಿನ ವಾತಾವರಣವಿರಲಿದೆ. ಹಾಗಿದ್ದರೂ ಬುಧವಾರದಿಂದ ಕೆಲವು ಕಡೆ ಸಣ್ಣ ಪ್ರಮಾಣದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದೀತು. ಅದು ಬಿಟ್ಟರೆ ತಾಪಮಾನ ಇನ್ನಷ್ಟು ಏರಿಕೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments