Webdunia - Bharat's app for daily news and videos

Install App

ಕರ್ನಾಟಕ ಹವಾಮಾನ: ರಾಜ್ಯದ ಈ ಜಿಲ್ಲೆಗಳಿಗೆ ಸದ್ಯಕ್ಕೆ ಪ್ರವಾಸ ಬೇಡ

Krishnaveni K
ಬುಧವಾರ, 5 ಮಾರ್ಚ್ 2025 (08:47 IST)
ಬೆಂಗಳೂರು: ಬೇಸಿಗೆ ಟೈಂ, ಮಕ್ಕಳಿಗೆ ರಜೆಯಿರುತ್ತದೆ ಎಂಬ ಕಾರಣಕ್ಕೆ ಟೂರ್ ಪ್ಲ್ಯಾನ್ ಮಾಡಿಕೊಂಡಿದ್ದರೆ ರಾಜ್ಯದ ಈ ಭಾಗಗಳಿಗೆ ಸದ್ಯಕ್ಕೆ ಹೋಗದಿರುವುದೇ ವಾಸಿ.

ಕರ್ನಾಟಕದಲ್ಲಿ ಈಗ ಕಡುಬಿಸಿಲಿನ ವಾತಾವರಣ ಶುರುವಾಗಿದೆ. ಸದಾ ಕೂಲ್ ಆಗಿರುತ್ತಿದ್ದ ರಾಜ್ಯ ರಾಜಧಾನಿ ಬೆಂಗಳೂರು ಕೂಡಾ ಈಗ ಕರಾವಳಿ ನಗರಗಳಂತೆ ಹಾಟ್ ಹಾಟ್ ಆಗಿದೆ. ಹಾಗಿದ್ದ ಮೇಲೆ ಕರಾವಳಿ ಜಿಲ್ಲೆಗಳು, ಉತ್ತರ ಕರ್ನಾಟಕದ ಜಿಲ್ಲೆಗಳ ಪರಿಸ್ಥಿತಿ ಕೇಳುವುದೇ ಬೇಡ.

ರಾಜ್ಯದ ಕೆಲವು ಜಿಲ್ಲೆಗಳಿಗೆ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ ಮುಂತಾದ ಜಿಲ್ಲೆಗಳ ತಾಪಮಾನ 40 ರ ಗಡಿ ದಾಟಿದೆ. ಈ ಜಿಲ್ಲೆಗಳಿಗೆ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ.

ಇನ್ನೇನು ಮಕ್ಕಳಿಗೆ ಪರೀಕ್ಷೆ ಮುಗಿದು ರಜೆ ಶುರುವಾಗಲು ಕೆಲವೇ ದಿನ ಬಾಕಿಯಿದೆ. ಈ ರಜೆಯಲ್ಲಿ  ಈ ಜಿಲ್ಲೆಗಳಿಗೆ ಪ್ರವಾಸ ಮಾಡಬೇಕೆಂದು ಪ್ಲ್ಯಾನ್ ಮಾಡಿಕೊಂಡಿದ್ದರೆ ಮುಂದೂಡುವುದೇ ಉತ್ತಮ. ಈ ಜಿಲ್ಲೆಗಳಲ್ಲಿ ಬೇಸಿಗೆಯ ತಾಪ ಇನ್ನಷ್ಟು ಹೆಚ್ಚಾಗಲಿದ್ದು, ಮಧ್ಯಾಹ್ನದ ಹೊತ್ತು ಹೊರಗಡೆ ಓಡಾಡುವುದನ್ನು ತಪ್ಪಿಸಿದರೇ ಒಳ್ಳೆಯದು. ವಿಶೇಷವಾಗಿ ರಜೆ ಸಂದರ್ಭದಲ್ಲಿ ಮಂಗಳೂರು, ಕಾರವಾರ ಮುಂತಾದ ಬೀಚ್ ಸೈಡ್ ಗೆ ಹೋಗಲು ಜನ ಯೋಜನೆ ಹಾಕಿಕೊಳ್ಳುತ್ತಾರೆ. ಆದರೆ ಈ ರಜೆಯಲ್ಲಿ ಟೂರ್ ಪ್ಲ್ಯಾನ್ ಮಾಡಿಕೊಂಡಿದ್ದರೆ ಈ ಜಿಲ್ಲೆಗಳಿಗೆ ಹೋಗದಿರುವುದೇ ವಾಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments