Webdunia - Bharat's app for daily news and videos

Install App

ಕರ್ನಾಟಕ ಕರಾವಳಿ ಎರಡು ದಿನ ಮಳೆಗೆ ಬ್ರೇಕ್, ಈ ದಿನದಿಂದ ಮತ್ತೆ ಶುರುವಾಗಲಿದೆ ವರುಣನ ಅಬ್ಬರ

Krishnaveni K
ಗುರುವಾರ, 8 ಆಗಸ್ಟ್ 2024 (10:29 IST)
ಬೆಂಗಳೂರು: ಸತತ ಮಳೆಯಿಂದ ಕಂಗೆಟ್ಟಿದ್ದ ಕರಾವಳಿಗರಿಗೆ ಎರಡು ದಿನ ವರುಣ ಬ್ರೇಕ್ ನೀಡಿದ್ದ. ಆದರೆ ಈಗ ಮತ್ತೆ ಈ ದಿನದಿಂದ ಮಳೆ ಅಬ್ಬರ ಶುರುವಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ.  ಕರ್ನಾಟಕದ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ.

ಕರಾವಳಿಯಲ್ಲಿ ಎರಡು ದಿನ ಮಳೆ ಕೊಂಚ ಕಡಿಮೆಯಾಗಿದ್ದರಿಂದ ಜನ ನಿಟ್ಟುಸಿರು ಬಿಡುವಂತಾಗಿತ್ತು. ಶಾಲಾ-ಕಾಲೇಜುಗಳೂ ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಆದರೆ ಇಂದಿನಿಂದ ಮತ್ತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿವೆ.

ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದ್ದಂತೇ ಬೆಂಗಳೂರಿನಲ್ಲಿ ಕಳೆದ ಎರಡು-ಮೂರು ದಿನ ಉತ್ತಮ ಮಳೆಯಾಗುತ್ತಿತ್ತು. ಆದರೆ ಇಂದಿನಿಂದ ಮತ್ತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರವಿರಲಿದ್ದು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲದೆ, ಬಾಗಲಕೋಟೆ, ಗದಗ, ಹಾವೇರಿ, ಯಾದಗಿರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲೂ ಇಂದು ಉತ್ತಮ ಮಳೆಯಾಗಲಿದೆ. ಬೆಂಗಳೂರಿನಲ್ಲೂ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದ್ದು, ಇಂದೂ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿಯಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

ಮುಂದಿನ ಸುದ್ದಿ
Show comments