Webdunia - Bharat's app for daily news and videos

Install App

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Krishnaveni K
ಗುರುವಾರ, 17 ಏಪ್ರಿಲ್ 2025 (08:55 IST)
ಬೆಂಗಳೂರು: ರಾಜ್ಯದ ವಿವಿಧೆಡೆ ಈಗ ಮುಂಗಾರುಪೂರ್ವ ಮಳೆಯ ಅಬ್ಬರವಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರು ಕೂಡಾ ಹೊರತಾಗಿಲ್ಲ. ಬೆಂಗಳೂರಿಗರಿಗೆ ಹವಾಮಾನ ಇಲಾಖೆ ಮುಂದಿನ ಐದು ದಿನಗಳಿಗೆ ಗುಡ್ ನ್ಯೂಸ್ ನೀಡಿದೆ.

ಈ ಬಾರಿ ಬೆಂಗಳೂರಿನಲ್ಲೂ ಕರಾವಳಿಯಂತೆ ವಿಪರೀತ ತಾಪಮಾನ ಕಂಡುಬರುತ್ತಿದೆ. ಸೆಖೆ, ಬಿಸಿಲಿನಿಂದ ತತ್ತಿರಿಸಿರುವ ಜನತೆಗೆ ನಿನ್ನೆ ಸಂಜೆ ವರುಣ ತಂಪೆರಗಿದ್ದ. ಮೆಜೆಸ್ಟಿಕ್, ಜಯನಗರ, ಶಾಂತಿನಗರ, ಕೆಆರ್ ಪುರಂ, ಹೆಬ್ಬಾಳ  ಸೇರಿದಂತೆ ಬಹುತೇಕ ಕಡೆ ನಿನ್ನೆ ಸಂಜೆ ಭಾರೀ ಮಳೆಯಾಗಿತ್ತು.

ಇದೀಗ ಹವಾಮಾನ ವರದಿ ಪ್ರಕಾರ ಮುಂದಿನ 5 ದಿನಗಳಿಗೆ ಬೆಂಗಳೂರಿನಲ್ಲಿ ಸಂಜೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಮುಂದಿನ ಐದು ದಿನಗಳಿಗೆ ಬೆಂಗಳೂರಿನ ಬಹುತೇಕ ಕಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ಉಳಿದಂತೆ ರಾಜ್ಯದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುತ್ತಿದೆ. ಒಂದೆಡೆ ಭಾರೀ ಸೆಖೆ, ಬಿಸಿಲಿನ ವಾತಾವರಣವಿದ್ದರೆ ಅದರ ನಡುವೆ ಮಳೆಯಾಗುತ್ತಿರುವುದು ಕೊಂಚ ಮಟ್ಟಿಗೆ ಸಮಾಧಾನ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments