Webdunia - Bharat's app for daily news and videos

Install App

Karnataka Weather: ಸತತ ಸೆಖೆ, ಬಿಸಿಲಿನಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಗುಡ್ ನ್ಯೂಸ್

Krishnaveni K
ಬುಧವಾರ, 7 ಮೇ 2025 (09:00 IST)
ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಬೇಸಿಗೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಸತತ ಸೆಖೆ, ಬಿಸಿಲಿನಿಂದ ತತ್ತರಿಸಿದ್ದ ಜನಕ್ಕೆ ಈಗ ಗುಡ್ ನ್ಯೂಸ್ ಸಿಗಲಿದೆ.

ರಾಜ್ಯದಲ್ಲಿ ಕಳೆದ ವಾರ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಬಿರು ಬೇಸಿಗೆಯ ನಡುವೆ ವರುಣನ ಆಗಮನ ಕೊಂಚ ತಂಪು ನೀಡಿತ್ತು. ಆದರೆ ಈ ವಾರದ ಆರಂಭದಿಂದಲೇ ಮಳೆ ಕಡಿಮೆಯಾಗಿದ್ದು ಬಿಸಿಲಿನ ಅಬ್ಬರ ಕಂಡುಬರುತ್ತಿದೆ.

ಆದರೆ ಇದೀಗ ಹವಾಮಾನ ವರದಿಗಳು ಗುಡ್ ನ್ಯೂಸ್ ನೀಡಿದೆ. ಗುರುವಾರದಿಂದ ರಾಜ್ಯದ ಬಹುತೇಕ ಕಡೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಲೇಟೆಸ್ಟ್ ಹವಾಮಾನ ವರದಿಗಳು ಹೇಳುತ್ತಿವೆ. ನಿನ್ನೆ ಬೆಂಗಳೂರು, ದಕ್ಷಿಣ ಕನ್ನಡದ ಕೆಲವು ಭಾಗಗಳು ಸೇರಿದಂತೆ ಕೆಲವೇ ಭಾಗಗಳಲ್ಲಿ ಸಣ್ಣ ಮಟ್ಟಿನ ಮಳೆಯಾಗಿತ್ತು.

ಇಂದೂ ಕೂಡಾ ಮೋಡ ಕವಿದ ವಾತಾವರಣ ಮತ್ತು ಕೆಲವೆಡೆ ಮಾತ್ರ ಹನಿ ಮಳೆಯಾಗಲಿದೆ. ಉಳಿದಂತೆ ಸೆಖೆಯ ವಾತಾವರಣವಿರಲಿದೆ. ಆದರೆ ನಾಳೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇಂದು ರಾಜ್ಯದ ಗರಿಷ್ಠ ತಾಪಮಾನ 31 ರಿಂದ 32 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments