Webdunia - Bharat's app for daily news and videos

Install App

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Krishnaveni K
ಸೋಮವಾರ, 9 ಜೂನ್ 2025 (08:15 IST)
ಬೆಂಗಳೂರು: ಕಳೆದ ವಾರವಿಡೀ ವರುಣ ಕೊಂಚ ಮಟ್ಟಿಗೆ ಬಿಡುವು ಮಾಡಿಕೊಂಡಿದ್ದ. ಆದರೆ ಇಂದಿನಿಂದ ಮತ್ತೆ ಮಳೆ ಅಬ್ಬರ ಶುರುವಾಗಲಿದೆ. ಈ ಜಿಲ್ಲೆಗಳಿಗೆ ಇಂದಿನಿಂದ ಮಳೆ ಅಬ್ಬರಿಸಲಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

ಈ ಬಾರಿ ಬೇಗನೇ ಮುಂಗಾರು ಆರಂಭವಾಗಿತ್ತು. ಹೀಗಾಗಿ ಭಾರೀ ಮಳೆ ನಿರೀಕ್ಷಿಸಲಾಗಿತ್ತು. ಅದರಂತೆ ಮೊದಲ ವಾರ ಭಾರೀ ಮಳೆಯಾಗಿ ಎಲ್ಲೆಡೆ ಪ್ರವಾಹ ಸ್ಥಿತಿಯಾಗಿತ್ತು. ಆದರೆ ಅದಾದ ಬಳಿಕ ಕಳೆದ ಒಂದು ವಾರದಿಂದ ಮಳೆ ಕೊಂಚ ಕಡಿಮೆಯಾಗಿತ್ತು.

ಆದರೆ ಈಗ ಮತ್ತೆ ಮುಂಗಾರು ಚುರುಕುಗೊಳ್ಳಲಿದೆ. ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದರಲ್ಲೂ ಜೂನ್ 11 ರಿಂದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಜೋರಾಗಲಿದೆ ಎಂದು ವರದಿಗಳು ಹೇಳುತ್ತಿವೆ. ನಿನ್ನೆಯೇ ಕೆಲವೆಡೆ ತುಂತುರು ಮಳೆ, ಮೋಡ ಕವಿದ ವಾತಾವರಣವಿತ್ತು. ಇಂದು ಮಳೆ ಇನ್ನಷ್ಟು ತೀವ್ರಗೊಳ್ಳಲಿದೆ.

ಬೆಂಗಳೂರು, ದಕ್ಷಿಣ ಕನ್ನಡ, ಮಂಡ್ಯ, ಉತ್ತರ ಕನ್ನಡ, ಕೊಡಗು, ಉಡುಪಿ, ಕೋಲಾರ, ಹಾಸನ, ಚಾಮರಾಜನಗರ, ತುಮಕೂರು, ಶಿವಮೊಗ್ಗ, ರಾಯಚೂರು, ಹಾವೇರಿ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಬಿಜಾಪುರ, ಚಿತ್ರದುರ್ಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಉಳಿದಂತೆ ಹಾಸನ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments