Publish Date: Wed, 05 Aug 2026 (16:02 IST)
Updated Date: Wed, 05 Aug 2026 (16:05 IST)
ಬೆಂಗಳೂರು: ಕಳೆದ ಕೆಲ ದಿನಗಳಿಂದ ಹಾಸನ, ಕೊಡಗು ಹಾಗೂ ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದೀಗ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ನಾಲ್ಕು ದಿನವೂ ಭಾರೀ ಮಳೆಯಾಗಲಿದೆ ಎನ್ನಲಾಗಿದೆ.
ಈ ಹಿನ್ನೆಲೆ ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕ ಕ್ರಮವಾಗಿ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮಳೆ ಮಾಹಿತಿ ಪ್ರಕಾರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಒಂದು ಅಥವಾ ಎರಡು ಕಡೆಗಳಲ್ಲಿ 64.5 ಮಿ.ಮೀನಿಂದ 115.4 ಮಿ.ಮಿ ವರೆಗೆ ಭಾರಿ ಮಳೆಯಾಗಲಿದೆ.
ಇನ್ನೂ ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಸಾದ ಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಕೂಡಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆ ಮುನ್ನೆಚ್ಚರಿಕ ಕ್ರಮವಾಗಿ ಈ ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ