Karnataka Weather: ಒಂದೇ ಮಳೆಗೆ ತುಂಬಿ ಹರಿದ ಬೆಂಗಳೂರು ರಸ್ತೆಗಳು

Krishnaveni K
ಶನಿವಾರ, 22 ಮಾರ್ಚ್ 2025 (17:09 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ನಿರೀಕ್ಷೆಯಂತೇ ಭಾರೀ ಮಳೆಯಾಗುತ್ತಿದೆ. ಆದರೆ ಒಂದೇ ಮಳೆಗೆ ರಸ್ತೆಗಳು ಜಲಾವೃತವಾಗಿದೆ.

ಇಂದು ಅಪರಾಹ್ನ 4 ಗಂಟೆಯಿಂದ ಮಳೆ ಸುರಿಯಲು ಆರಂಭವಾಗಿದೆ. ಹೆಬ್ಬಾಳ, ಕೆಆರ್ ಪುರಂ, ಯಲಹಂಕ, ಮೆಜೆಸ್ಟಿಕ್ ಸೇರಿದಂತೆ ಬಹುತೇಕ ಕಡೆ ಭಾರೀ ಮಳೆಯಾಗುತ್ತಿದೆ. ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಗೆ ಜನ ಮನೆಯಿಂದ ಹೊರಬರಲು ಸಾಧ್ಯವಾಗದ ಸ್ಥಿತಿಯಾಗಿದೆ.

ಇನ್ನು, ಒಂದೇ ಒಂದು ಮಳೆಗೆ ಬೆಂಗಳೂರಿನ ರಸ್ತೆಗಳು ಜಲಾವೃತವಾಗಿದೆ. ರಸ್ತೆಯಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವ ಸ್ಥಿತಿಯಾಗಿದೆ. ಹೆಬ್ಬಾಳದಿಂದ ಕೆಆರ್ ಪುರಂವರೆಗಿನ ರಿಂಗ್ ರೋಡ್ ನಲ್ಲಿ ಅಲ್ಲಲ್ಲಿ ಮಳೆ ನೀರು ರಸ್ತೆಯಲ್ಲೇ ನಿಂತಿದ್ದು, ವಾಹನ ಚಾಲನೆ ಕಷ್ಟವಾಗಿದೆ.

ಸತತ ಒಂದು ಗಂಟೆಯಿಂದ ಮಳೆ ಸುರಿಯುತ್ತಿದ್ದು, ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಇದ್ದಕ್ಕಿದ್ದಂತೆ ಸುರಿದ ಬೇಸಿಗೆ ಮಳೆಯಿಂದ ಜನರು ಪರದಾಡುವಂತಾಗಿದೆ. ಆದರೆ ಸತತ ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರಿಗೆ ಈ ಮಳೆ ತಂಪೆರಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments