Publish Date: Wed, 04 Mar 2026 (08:38 IST)
Updated Date: Wed, 04 Mar 2026 (08:42 IST)
ಬೆಂಗಳೂರು: ಕರ್ನಾಟಕದಲ್ಲಿ ಈಘಾಗಲೇ ಕಡುಬೇಸಿಗೆ ಶುರುವಾಗಿದೆ. ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರಣಬಿಸಿಲು ಇರಲಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ.
ಚಳಿಗಾಲ ಹೋಗಿ ಈಗ ಬಿಸಿಲುಗಾಲ ಶುರುವಾಗಿದೆ. ಅದರಲ್ಲೂ ಬಿಸಿಲಿನ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ವಾರ ಕೆಲವು ಜಿಲ್ಲೆಗಳಲ್ಲಿ ಸಣ್ಣ ಮಳೆಯಾಗಿತ್ತು. ಆದರೆ ಈ ವಾರವಿಡೀ ಮಳೆಯಾಗುವ ಸಾಧ್ಯತೆಯಿಲ್ಲ. ಬದಲಾಗಿ ತಾಪಮಾನ ಮತ್ತಷ್ಟು ಹೆಚ್ಚಾಗಲಿದೆ.
ಇಂದು ಬಳ್ಳಾರಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕಲಬುರಗಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರಣ ಬಿಸಿಲಿರಲಿದೆ. ಈ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟು ಕಂಡುಬರುವುದು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಕ್ಕೆ ಏರಿಕೆಯಾಗಲಿದೆ.
ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 33 ಡಿಗ್ರಿಯಷ್ಟು ಕಂಡುಬರುವುದು. ಕನಿಷ್ಠ ತಾಪಮಾನ 19 ಡಿಗ್ರಿಯಷ್ಟಿರಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ರಣ ಬಿಸಿಲಿರಲಿದ್ದು ಗರಿಷ್ಠ ತಾಪಮಾನ 33 ಡಿಗ್ರಿಯಷ್ಟು ಕಂಡುಬರಲಿದೆ.