Webdunia - Bharat's app for daily news and videos

Install App

Karnataka Weather: ಈ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ಝಳ ಮತ್ತಷ್ಟು ಹೆಚ್ಚಳ

ಕೃಷ್ಣವೇಣಿ ಕೆ
ಶುಕ್ರವಾರ, 17 ಏಪ್ರಿಲ್ 2026 (08:52 IST)
ಬೆಂಗಳೂರು: ರಾಜ್ಯದಲ್ಲಿ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ಇಂದಂತೂ ಈ ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ಝಳ ಮತ್ತಷ್ಟು ಹೆಚ್ಚಾಗಲಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದೆ. ನಿನ್ನೆಯೇ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ದಾಟಿತ್ತು. ಇಂದು ತಾಪಮಾನ ಮತ್ತಷ್ಟು ಹೆಚ್ಚಾಗಲಿದ್ದು ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ದಾಟಲಿದೆ.

ವಿಶೇಷವಾಗಿ ರಾಯಚೂರಿನಲ್ಲಿ ಇಂದು ಗರಿಷ್ಠ ತಾಪಮಾನ 41 ಡಿಗ್ರಿಯಷ್ಟಾಗಲಿದೆ. ಬೀದರ್, ಗದಗ, ಬಳ್ಳಾರಿ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿಯಷ್ಟಾಗಲಿದೆ. ಇದರ ನಡುವೆಯೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಸಣ್ಣ ಮಳೆಯ ಸಂಭವವೂ ಇದೆ ಎನ್ನುತ್ತಿದೆ ಹವಾಮಾನ ವರದಿಗಳು.

ರಾಜ್ಯ ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗರಿಷ್ಠ ತಾಪಮಾನ 36 ಡಿಗ್ರಿಯಷ್ಟಾಗಲಿದೆ. ರಾಜ್ಯದ ಸರಾಸರಿ ಗರಿಷ್ಠ ತಾಪಮಾನ ಇಂದು 36 ಡಿಗ್ರಿಯಷ್ಟಿದ್ದರೆ, ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments