Webdunia - Bharat's app for daily news and videos

Install App

Karnataka Weather: ಈ ಬಾರಿ ಮುಂಗಾರು ಹೊಸ ದಾಖಲೆ ಮಾಡಲಿದೆ, ಏನಿದರ ವಿಶೇಷ ನೋಡಿ

Krishnaveni K
ಶುಕ್ರವಾರ, 23 ಮೇ 2025 (09:18 IST)
ಬೆಂಗಳೂರು: ಈ ಬಾರಿ ಪ್ರಕೃತಿ ಬೇಸಿಗೆಯಲ್ಲೇ ಮಳೆ ನೀಡುವ ಮೂಲಕ ಉತ್ತಮ ಮಳೆಯ ಸೂಚನೆ ನೀಡಿದೆ. ಇದಕ್ಕೆ ಇನ್ನೊಂದು ಸೇರ್ಪಡೆ ಎಂಬಂತೆ ಈ ಬಾರಿ ಮುಂಗಾರು ಕೂಡಾ ಹೊಸ ದಾಖಲೆ ಮಾಡಲಿದೆ. ಅದೇನದು ಈ ವರದಿ ನೋಡಿ.

ಹವಾಮಾನ ವರದಿಗಳು ಈಗಾಗಲೇ ಹೇಳಿದಂತೆ ಈ ಬಾರಿ ಮುಂಗಾರು ಮಳೆ ಎಂದಿಗಿಂತ ಮೊದಲೇ ಕೇರಳ ಪ್ರವೇಶ ಮಾಡಲಿದೆ. ಈ ಮೊದಲು ಮೇ 27 ರಂದು ಮುಂಗಾರು ಪ್ರವೇಶ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಈಗ ಇನ್ನೂ ಮೊದಲು ಅಂದರೆ ಮೇ 23 ಅಥವಾ 24 ರಂದೇ ಮುಂಗಾರು ಆಗಮನವಾಗಲಿದೆ ಎಂದು ಲೇಟೆಸ್ಟ್ ಹವಾಮಾನ ವರದಿಗಳು ಹೇಳಿವೆ.

ಈ ವಾರಂತ್ಯದಿಂದ ಕರ್ನಾಟಕಕ್ಕೂ ಮಳೆಯಾಗುವ ನಿರೀಕ್ಷೆಯಿದೆ. ಈ ಮೂಲಕ ಮುಂಗಾರು ಹೊಸ ದಾಖಲೆ ಮಾಡಲಿದೆ. ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಮುಂಗಾರು ಕರ್ನಾಟಕಕ್ಕೆ ಪ್ರವೇಶವಾಗುತ್ತದೆ. ಆದರೆ ಈ ಬಾರಿ ಮೇ ತಿಂಗಳಲ್ಲೇ ಆಗಮನವಾಗುವ ಮೂಲಕ ಹೊಸ ದಾಖಲೆಯಾಗಲಿದೆ.

ಕಳೆ 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮುಂಗಾರು ಮೇ ತಿಂಗಳಲ್ಲಿ ಪ್ರವೇಶ ಮಾಡುವ ಮೂಲಕ ದಾಖಲೆ ಮಾಡುತ್ತಿದೆ. ಈ ಬಾರಿ ಸೆಪ್ಟೆಂಬರ್ ವರೆಗೂ ಉತ್ತಮ ಮಳೆ ನಿರೀಕ್ಷಿಸಲಾಗಿದೆ. ಅರೆಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಅಬ್ಬರ ಕಡಿಮೆಯಾಗಿರುವುದರಿಂದ ಈ ಬಾರಿ ಬೇಗ ಮಳೆಯಾಗಲಿದೆ ಎಂದು ಹೇಳಲಾಗಿದೆ. ಬೇಸಿಗೆ ಮಳೆಯೂ ಧಾರಾಕಾರವಾಗಿ ಸುರಿದಿದ್ದರಿಂದ ಈ ವರ್ಷ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಸಮಸ್ಯೆ ಕಡಿಮೆಯಾಗಿತ್ತು ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments