Publish Date: Fri, 02 Jan 2026 (08:35 IST)
Updated Date: Fri, 02 Jan 2026 (08:37 IST)
ಬೆಂಗಳೂರು: ಕಳೆದ ಎರಡು ದಿನಗಳಿಂದ ಚಳಿ ಕೊಂಚ ತಗ್ಗಿತ್ತು. ಆದರೆ ಇಂದಿನಿಂದ ಮತ್ತೆ ಚಳಿ ಹೆಚ್ಚಾಗಲಿದ್ದು, ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ.
ವಾಯುಭಾರ ಕುಸಿತದಿಂದ ಕಳೆದ ಎರಡು ದಿನ ಮಳೆಯ ಸೂಚನೆಯಿತ್ತು. ತಾಪಮಾನವೂ ಕೊಂಚ ಏರಿಕೆಯಾಗಿತ್ತು. ಆದರೆ ಇಂದಿನಿಂದ ಮತ್ತೆ ತಾಪಮಾನದಲ್ಲಿ ಇಳಿಕೆ ಕಂಡುಬರಲಿದೆ. ಹವಾಮಾನ ವರದಿಗಳ ಪ್ರಕಾರ ಇಂದು ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 20 ಡಿಗ್ರಿಯಷ್ಟಿರಲಿದೆ. ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದೆ.
ವಿಶೇಷವಾಗಿ ಚಿಕ್ಕಮಗಳೂರು, ಕೊಡಗು, ಬೆಂಗಳೂರು, ಹಾಸನ, ಹುಬ್ಬಳ್ಳಿ ಮೊದಲಾದ ಜಿಲ್ಲೆಗಳಲ್ಲಿ ಮತ್ತೆ ತಾಪಮಾನದಲ್ಲಿ ಇಳಿಕೆ ಕಂಡುಬರುವುದು. ಆದರೆ ಬೀದರ್ ನಲ್ಲಿ ನಿನ್ನೆಯವರೆಗೂ ವಿಪರೀತ ಇಳಿಕೆ ಕಂಡಿದ್ದ ತಾಪಮಾನ ಇಂದಿನಿಂದ ಕೊಂಚ ಏರಿಕೆಯಾಗುವುದು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿಯಷ್ಟಿರಲಿದೆ. ಮುಂದಿನ ವಾರದಲ್ಲಿ ತಾಪಮಾನ ಇನ್ನಷ್ಟು ಇಳಿಕೆಯಾಗುವ ಸೂಚನೆಯಿದೆ.