Webdunia - Bharat's app for daily news and videos

Install App

Karnataka Weather: ಇನ್ನು ಎರಡು ದಿನ ಮಳೆ ಜೊತೆಗೆ ರಾಜ್ಯದ ಜನರು ಈ ಎಚ್ಚರಿಕೆ ಗಮನಿಸಿ

Krishnaveni K
ಸೋಮವಾರ, 26 ಮೇ 2025 (08:38 IST)
ಬೆಂಗಳೂರು: ವಾರಕ್ಕೆ ಮುಂಚೆಯೇ ಕೇರಳ ಪ್ರವೇಶಿಸಿದ್ದ ಮುಂಗಾರು ಮಳೆ ಈಗ ಕರಾವಳಿ ಭಾಗದಲ್ಲಿ ರುದ್ರನರ್ತನ ಮಾಡುತ್ತಿದೆ. ಇನ್ನು ಎರಡು ದಿನಗಳ ಕಾಲ ಮಳೆ ಜೊತೆಗೆ ಕರಾವಳಿ ಸೇರಿದಂತೆ ರಾಜ್ಯದ ಜನ ಈ ಎಚ್ಚರಿಕೆ ಗಮನಿಸಬೇಕಿದೆ.

ಮುಂಗಾರು ಮಳೆ ಈ ಬಾರಿ ಬೇಗನೇ ಆಗಮನವಾಗಿರುವುದು ಮಾತ್ರವಲ್ಲದೆ, ಭಾರೀ ಮಳೆಯ ಸೂಚನೆಯನ್ನೂ ನೀಡಿದೆ. ಮೇ 31 ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಅದರಲ್ಲೂ ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ.

ಕರಾವಳಿ ಜಿಲ್ಲೆಗಳಲ್ಲಂತೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಸಂದರ್ಭಗಳಲ್ಲಿ ಸಮುದ್ರ ತೀರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಆದಷ್ಟು ಹೊರಗೆ ಓಡಾಡುವುದನ್ನು ತಪ್ಪಿಸಿದರೆ ಒಳಿತು. ರಸ್ತೆಗಳಲ್ಲಿ ನೀರು ನಿಂತು ವಾಹನ ಚಾಲನೆ ಕಷ್ಟವಾಗಬಹುದು. ಹೀಗಾಗಿ ಅಪಾಯ ಮೈಮೇಲೆಳೆದುಕೊಳ್ಳದೇ ಸುರಕ್ಷಿತ ರಸ್ತೆಗಳಲ್ಲಿ ಮಾತ್ರ ಚಾಲನೆ ಮಾಡಿ.

ಇನ್ನು, ಇದೀಗ ಕೊರೋನಾ ಸೇರಿದಂತೆ ಸಾಂಕ್ರಮಿಕ ರೋಗದ ಭೀತಿಯೂ ಅಧಿಕವಾಗಿದೆ. ಶೈತ್ಯ ಹವೆಯಲ್ಲಿ ಇಂತಹ ರೋಗಗಳು ಹರುಡುವುದು ಹೆಚ್ಚು. ಹೀಗಾಗಿ ಆರೋಗ್ಯದ ಬಗ್ಗೆಯೂ ಎಚ್ಚರಿಕೆ ವಹಿಸಬೇಕು. ಬೆಂಗಳೂರಿನಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳು ಕಂಡುಬಂದಿದ್ದು, ಇಲ್ಲಿ ಶೈತ್ಯ ಹವಾಗುಣದಲ್ಲಿ ಆದಷ್ಟು ಮಾಸ್ಕ್ ಧರಿಸಿ ಓಡಾಡುವುದು, ಬೆಚ್ಚಗಿನ ನೀರು ಸೇವನೆ ಮಾಡುವುದು ಮುಖ್ಯವಾಗಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಆಹಾರಗಳನ್ನು ಸೇವನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ತನಿಖೆ ಹೊಣೆ ವಿಶೇಷ ತನಿಖಾ ತಂಡದ ಹೆಗಲಿಗೆ

ಗರ್ಭಕಂಠದ ಕ್ಯಾನ್ಸರ್​ ತಡೆಯಲು ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಮುಂದಿನ ಸುದ್ದಿ
Show comments