Select Your Language

Notifications

webdunia
webdunia
webdunia
webdunia

Karnataka Weather: ದಸರಾ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

Karnataka Rains

Krishnaveni K

ಬೆಂಗಳೂರು , ಸೋಮವಾರ, 29 ಸೆಪ್ಟಂಬರ್ 2025 (09:08 IST)
ಬೆಂಗಳೂರು: ಕಳೆದ ವಾರ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಈ ವಾರ ದಸರಾ ಹಬ್ಬದ ಸಂದರ್ಭವಾಗಿದ್ದು, ವಾರವಿಡೀ ಮಳೆಯಿರುತ್ತಾ, ಹೇಗಿರಲಿದೆ ಹವಾಮಾನ ಇಲ್ಲಿದೆ ವಿವರ.

ಕಳೆದ ವಾರ ಕರಾವಳಿ, ಒಳನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿತ್ತು. ಬೆಂಗಳೂರಿನಲ್ಲಿ ವಾರದ ನಡುವೆ ಕೆಲವೊಂದು ದಿನ ಮಳೆ ಕಂಡುಬಂದಿತ್ತು. ಆದರೆ ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಮಳೆಯ ಅಬ್ಬರ ಕಡಿಮೆಯಾಗಲಿದೆ.

ಆದರೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಯಾದಗಿರಿ, ಬೀದರ್, ಕಲಬುರಗಿ, ಗದಗ, ಕೊಪ್ಪಳ, ಹಾವೇರಿ, ರಾಯಚೂರು, ದಾವಣಗೆರೆ, ಬಾಗಲಕೋಟೆ, ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ವಾರವಿಡೀ ಮಳೆ, ಮೋಡ ಕವಿದ ವಾತಾವರಣ ಕಂಡುಬರುವುದು. ಆದರೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆಯಷ್ಟೇ.

ಉಳಿದಂತೆ ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ತುಮಕೂರು, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ಒಂದೆರಡು ದಿನ ಮೋಡ ಕವಿದ ವಾತಾವರಣ ಬಿಟ್ಟರೆ ಉಳಿದ ದಿನ ಬಿಸಿಲು ಇರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ