Select Your Language

Notifications

webdunia
webdunia
webdunia
webdunia

Karnataka Weather: ಮಳೆಯ ಅಬ್ಬರ ಇನ್ನೆಷ್ಟು ದಿನ, ಈ ವಾರದ ಹವಾಮಾನ ವರದಿ ಇಲ್ಲಿದೆ

Karnataka Rains

Krishnaveni K

ಬೆಂಗಳೂರು , ಸೋಮವಾರ, 2 ಜೂನ್ 2025 (08:18 IST)
ಬೆಂಗಳೂರು: ಕಳೆದ ವಾರವಿಡೀ ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಬಲು ಜೋರಾಗಿಯೇ ಇತ್ತು. ಈ ವಾರವೂ ಮಳೆಯ ಅಬ್ಬರವಿರಲಿದೆಯಾ ಇಲ್ಲಿದೆ ವಾರದ ಹವಾಮಾನ ವರದಿ.

ಈ ಬಾರಿ ಮೇ ಕೊನೆಯ ವಾರದಲ್ಲೇ ಮುಂಗಾರು ಕೇರಳ ಪ್ರವೇಶಿಸಿತ್ತು. ಇದರಿಂದಾಗಿ ಕೇರಳ ಮಾತ್ರವಲ್ಲದೆ, ಕರ್ನಾಟಕದಲ್ಲೂ ಭಾರೀ ಮಳೆಯಾಗಿತ್ತು. ಅದರಲ್ಲೂ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಪ್ರವಾಹ ಪರಿಸ್ಥಿತಿಯಾಗಿತ್ತು. ಮಳೆಯೆಂದರೆ ಜನ ಬೆಚ್ಚಿ ಬೀಳುವಷ್ಟು ಮಳೆಯಾಗಿತ್ತು.

ಆದರೆ ಈ ವಾರ ಇತರೆ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಈ ವಾರವೂ ಮಳೆಯಾಗಲಿದೆ. ಆದರೆ ಕಳೆದ ವಾರದಷ್ಟು ಅಬ್ಬರವಿರುವುದಿಲ್ಲ.

ಉಳಿದಂತೆ ಬೆಂಗಳೂರಿನಲ್ಲಿ ಬಹುತೇಕ ಈ ವಾರವೂ ಮೋಡ ಕವಿದ ವಾತಾವರಣವಿರಲಿದೆ. ಇನ್ನು, ಕಲಬುರಗಿ, ರಾಯಚೂರು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಮುಂತಾದ ಜಿಲ್ಲೆಗಳಲ್ಲಿ ಒಂದೆರಡು ದಿನ ಬಿಟ್ಟರೆ ಉಳಿದ ದಿನಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಈ ವಾರ ಗರಿಷ್ಠ ತಾಪಮಾನ 28 ರಿಂದ 29 ಡಿಗ್ರಿಯವರೆಗೆ ತಲುಪುವ ಸಾಧ್ಯತೆಯಿದೆ.


Share this Story:

Follow Webdunia kannada

ಮುಂದಿನ ಸುದ್ದಿ

Belgavi: ಈ ಗ್ಯಾಂಗ್ ರೇಪ್‌ ಕರ್ನಾಟಕದಲ್ಲಿ ನಡೆದಿದೆಯಾ ಎಂದಾಗ ಅಚ್ಚರಿಯಾಗುತ್ತದೆ