Webdunia - Bharat's app for daily news and videos

Install App

Karnataka Weather: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಈ ವಾರ ಮಳೆ ಬರುತ್ತಾ

Krishnaveni K
ಸೋಮವಾರ, 15 ಸೆಪ್ಟಂಬರ್ 2025 (08:30 IST)
ಬೆಂಗಳೂರು: ಕಳೆದ ವಾರ ಮಳೆಯ ಅಬ್ಬರ ಕಡಿಮೆಯಾಗಿತ್ತು. ಈ ವಾರ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಬರುವ ಸಾಧ್ಯತೆಯಿದೆಯೇ? ಇಲ್ಲಿದೆ ವಾರದ ಹವಾಮಾನ ವರದಿ.

ಕಳೆದ ವಾರ ಬೆಂಗಳೂರಿನಲ್ಲಿ ಒಂದೆರಡು ದಿನ ಬಿಟ್ಟರೆ ಬಹುತೇಕ ಬಿಸಿಲಿನ ವಾತಾವರಣವಿತ್ತು. ಕರಾವಳಿ ಜಿಲ್ಲೆಗಳಲ್ಲೂ ಇದೇ ಕತೆ. ಭಾರೀ ಬಿಸಿಲು, ಸೆಖೆ ಕಂಡುಬಂದಿತ್ತು. ಮಲೆನಾಡಿನಲ್ಲೂ ಇದೇ ಪರಿಸ್ಥಿತಿ. ಆದರೆ ಉತ್ತರ ಜಿಲ್ಲೆಗಳಲ್ಲಿ ಮಾತ್ರ ಕೆಲವು ಕಡೆ ಮಳೆಯಾಗಿತ್ತು.

ಆದರೆ ಈ ವಾರ ಹವಾಮಾನದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಇಷ್ಟು ದಿನ ಕೇವಲ ಮಳೆಯ ಅಬ್ಬರ ಮಾತ್ರವಿತ್ತು. ಆದರೆ ಈ ವಾರದ ಮಧ್ಯಭಾಗದಿಂದ ಬಹುತೇಕ ಕಡೆ ಗುಡುಗು ಸಹಿತ ಮಳೆಯ ಸೂಚನೆಯಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಮಾತ್ರವಿದ್ದರೆ ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆ ಕಂಡುಬರಲಿದೆ.

ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ರಾಯಚೂರು, ಕೊಪ್ಪಳ, ಬೀದರ್, ಹುಬ್ಬಳ್ಳಿ, ಧಾರವಾಡ, ಯಾದಗಿರಿ, ಬೆಳಗಾವಿ, ಬಳ್ಳಾರಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಈ ವಾರ ಗುಡುಗು ಸಹಿತ ಮಳೆಯಾಗುವ ಸೂಚನೆಯಿದೆ. ಉಳಿದ ಕಡೆ ಮೋಡ ಕವಿದ ವಾತಾವರಣ ಮತ್ತು ಸಣ್ಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆನರಾ ಬ್ಯಾಂಕ್‌ನಲ್ಲಿ ₹9.34ಪೈಸೆ ಬಾಕಿಗೆ ₹10ಪಾವತಿಸಿ 66 ಪೈಸೆ ವಾಪಾಸ್ ಕೇಳಿದ ರೈತ, Video

ದೆಹಲಿಗೆ ಹಣ ಕೊಡಲು ಬಿಡದಿ ಟೌನ್‌ಶಿಪ್ ಯೋಜನೆ ಬೇಕಾ: ಎಚ್‌ಡಿ ಕುಮಾರಸ್ವಾಮಿ

ರಾಮಮಂದಿರದ ಪ್ರತಿಯೊಂದ ನಿರ್ಧಾರಗಳನ್ನು ಮೋದಿಯೇ ಮಾಡಿದ್ದರಿಂದ ದೇಣಿಗೆ ವಿವಾದಕ್ಕೂ ಅವರೇ ಉತ್ತರಿಸಬೇಕು

ಭಾರತೀಯ ಮೂಲದ ಯುವತಿಯನ್ನು ಕೊಂದ 7 ತಿಂಗಳ ಬಳಿಕ ಆಕೆಯ ಪ್ರಿಯಕರ ಅರೆಸ್ಟ್‌

ಡಿಕ್ಕಿಯ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್‌, 40 ಮಂದಿಗೆ ಗಾಯ, Video

ಮುಂದಿನ ಸುದ್ದಿ
Show comments