Select Your Language

Notifications

webdunia
webdunia
webdunia
webdunia

Karnataka Rains: ರಾಜ್ಯದಲ್ಲಿ ಇಂದು ಮಳೆಯಾಗಲಿದೆಯೇ ಇಲ್ಲಿದೆ ವಿವರ

Karnataka Rain

Krishnaveni K

ಬೆಂಗಳೂರು , ಬುಧವಾರ, 23 ಏಪ್ರಿಲ್ 2025 (08:15 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ವಿಪರೀತ ಬಿಸಿಲಿನ ನಡುವೆಯೂ ಮಳೆಯ ಸಿಂಚನವಾಗುತ್ತಿದೆ. ಇಂದು ರಾಜ್ಯದ ಯಾವ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಇಲ್ಲಿದೆ ನೋಡಿ ವರದಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಕೆಲವೆಡೆ ಮಾತ್ರ ತುಂತುರು ಮಳೆ ಬಿಟ್ಟರೆ ಎರಡು ದಿನಗಳಿಂದ ಹೆಚ್ಚು ಮಳೆಯಾಗಿಲ್ಲ. ಇಂದೂ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.

ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಇಂದೂ ಮಳೆಯ ಸೂಚನೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆಯಿದೆ. ಕೊಡಗಿನಲ್ಲೂ ಇದೇ ವಾತಾವರಣವಿರಲಿದೆ.

ಉಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಉಳಿದಂತೆ ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿರಲಿದೆ ಎಂದು ವರದಿಗಳು ಹೇಳುತ್ತಿವೆ.

Share this Story:

Follow Webdunia kannada

ಮುಂದಿನ ಸುದ್ದಿ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ