Karnataka Weather: ರಾಜ್ಯದಲ್ಲಿ ಹವಾಮಾನ ಇಲಾಖೆಯ ಈ ಎಚ್ಚರಿಕೆ ತಪ್ಪದೇ ಗಮನಿಸಿ

Krishnaveni K
ಬುಧವಾರ, 28 ಮೇ 2025 (08:42 IST)
ಬೆಂಗಳೂರು: ರಾಜ್ಯದಲ್ಲಿ ಈಗ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಅವಧಿಗೆ ಮುನ್ನ ಬಂದ ಮಳೆ ಅವಾಂತರಗಳನ್ನೇ ಸೃಷ್ಟಿಸುತ್ತಿದೆ. ಇಂದು ಹವಾಮಾನ ಇಲಾಖೆಯ ಈ ವರದಿಯನ್ನು ತಪ್ಪದೇ ಗಮನಿಸಿ.
 

ಇಂದೂ ಕೂಡಾ ರಾಜ್ಯದ ಬಹುತೇ ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದೂ ಕೂಡಾ ಬಹುತೇಕ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಲ್ಲಿ ಮಳೆ ಅವಾಂತರಗಳನ್ನೇ ಸೃಷ್ಟಿಸಿದೆ. ಇಂದೂ ಕೂಡಾ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಇನ್ನು ಚಿಕ್ಕಮಗಳೂರು, ಕೊಡಗಿನಂತಹ ಗುಡ್ಡಗಾಡು ಪ್ರದೇಶಗಳಿಗೆ ಗುಡ್ಡ ಕುಸಿತದ ಭೀತಿ ಎದುರಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷಿಸಲಾಗಿದೆ.

ಉಳಿದಂತೆ ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಮಂಡ್ಯ, ಹಾಸನ, ಕೋಲಾರ, ತುಮಕೂರು, ಶಿವಮೊಗ್ಗ, ಹಾವೇರಿ, ಕಲಬುರಗಿ, ರಾಯಚೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಉಳಿದಂತೆ ಮೋಡ ಕವಿದ ವಾತಾವರಣವಿರಲಿದೆ. ಮೇ 31 ರವರೆಗೂ ಇದೇ ರೀತಿ ಭಾರೀ ಮಳೆ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments