Daily Horoscope

Karnataka Weather: ತಣ್ಣಗಾಯಿತೇ ಮಳೆಯ ಅಬ್ಬರ, ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

Krishnaveni K
ಮಂಗಳವಾರ, 29 ಜುಲೈ 2025 (08:42 IST)

ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರವಿಡೀ ರುದ್ರತಾಂಡವವಾಡುತ್ತಿದ್ದ ಮಳೆರಾಯ ಈ ವಾರ ತಣ್ಣಗಾಯಿತೇ? ಇಂದು ರಾಜ್ಯಾದ್ಯಂತ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ.

ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕಳೆದ ವಾರವಿಡೀ ಮಳೆಯಾಗಿತ್ತು. ಆದರೆ ಈ ವಾರ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬಿಟ್ಟರೆ ಅಷ್ಟೊಂದು ಮಳೆ ಕಂಡುಬರುತ್ತಿಲ್ಲ. ಈ ವಾರದ ಆರಂಭದ ಎರಡು ದಿನ ರಾಜ್ಯಾದ್ಯಂತ ಮಳೆಯ ಅಬ್ಬರ ಕೊಂಚ ಕಡಿಮೆಯಾಗಲಿದೆ. ಆದರೆ ವಾರಂತ್ಯದಲ್ಲಿ ಮತ್ತೆ ಮಳೆಯಾಗಲಿದೆ.

ಆದರೆ ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಈಗಲೂ ನಿರಂತರ ಮಳೆಯಾಗುತ್ತಿದೆ. ಆದರೆ ಕಳೆದ ವಾರದಷ್ಟು ಅಬ್ಬರವಿಲ್ಲ ಎನ್ನುವುದೇ ಸಮಾಧಾನಕರ ಅಂಶ. ಈ ವಾರವಿಡೀ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಉಡುಪಿಯಲ್ಲಿ ಕೊಂಚ ಮಳೆಯ ಅಬ್ಬರ ಕಡಿಮೆಯಾಗಲಿದೆ. ಚಿಕ್ಕಮಗಳೂರಿನಲ್ಲೂ ಮಳೆಯ ಅಬ್ಬರ ಕಡಿಮೆಯಾಗಿದೆ. ಇನ್ನು ಕೊಡಗು ಜಿಲ್ಲೆಯಲ್ಲೂ ವಾರವಿಡೀ ಸಾಧಾರಣ ಮಳೆಯಾಗಲಿದೆ.

ಉಳಿದಂತೆ ಹಾವೇರಿ, ಶಿವಮೊಗ್ಗ, ದಾವಣಗೆರೆ, ಗದಗ ಸೇರಿದಂತೆ ಕೆಲವೇ ಜಿಲ್ಲೆಗಳಿಗೆ ಇಂದು ಸಾಧಾರಣ ಮಳೆಯ ನಿರೀಕ್ಷೆಯಿದೆ. ಉಳಿದ ಬಹುತೇಕ ಜಿಲ್ಲೆಗಳಿಗೆ ಇಂದು ಮಳೆಯಿಲ್ಲದೇ ಇದ್ದರೂ ಮೋಡ ಕವಿದ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments