Select Your Language

Notifications

webdunia
webdunia
webdunia
webdunia

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಮಳೆಯ ಅಬ್ಬರ

Karnataka Rains

Krishnaveni K

ಬೆಂಗಳೂರು , ಶುಕ್ರವಾರ, 19 ಸೆಪ್ಟಂಬರ್ 2025 (08:37 IST)
ಬೆಂಗಳೂರು: ರಾಜ್ಯದಲ್ಲಿ ಇದೀಗ ಕೆಲವು ಜಿಲ್ಲೆಗಳನ್ನು ಬಿಟ್ಟರೆ ಉಳಿದ ಕಡೆ ಮಳೆಯ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗಿದೆ. ಆದರೆ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಕರ್ನಾಟಕದಲ್ಲಿ ಈ ವಾರವಿಡೀ ಉತ್ತರದ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆ ಮಳೆಯ ಅಬ್ಬರ ಕಡಿಮೆಯಾಗಿತ್ತು. ಮಳೆಗಿಂತ ಈ ವಾರ ಗುಡುಗು, ಸಿಡಿಲಿನ ಅಬ್ಬರವೇ ಹೆಚ್ಚಾಗಿದೆ. ಈ ವಾರಂತ್ಯದಲ್ಲೂ ಹಲವು ಕಡೆ ಮೋಡ ಕವಿದ ವಾತಾವರಣ ಮತ್ತು ಗುಡುಗು ಮಾತ್ರ ಇರಲಿದೆ.

ಬಳ್ಳಾರಿ, ಉತ್ತರ ಕನ್ನಡ, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಸಂಭವವಿದೆ. ವಿಶೇಷವಾಗಿ ಇಂದು ಗದಗ, ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಧಾರವಾಡ, ಹುಬ್ಬಳ್ಳಿ, ಯಾದಗಿರಿ, ದಾವಣಗೆರೆ, ಬಾಗಲಕೋಟೆ, ಬೆಳಗಾವಿ, ಗುಡುಗು ಸಿಡಿಲಿನ ವಾತಾವರಣವಿರಲಿದೆ.

ಉಳಿದಂತೆ ಮೈಸೂರು, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು, ರಾಮನಗರ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಹಾಸನ ಮೊದಲಾದ ಜಿಲ್ಲೆಗಳಲ್ಲಿ ಇಂದು ಸಣ್ಣ ಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳ ಬುರುಡೆ ರಹಸ್ಯ: ಮಹೇಶ್ ಶೆಟ್ಟಿ ವಿರುದ್ಧ ದಾಖಲಾಯಿತು ಮತ್ತೊಂದು ಪ್ರಕರಣ