Select Your Language

Notifications

webdunia
webdunia
webdunia
webdunia

Karnataka Weather: ವಾಯುಭಾರ ಕುಸಿತ ಪರಿಣಾಮ ಈ ಜಿಲ್ಲೆಗಳಿಗೆ ಇಂದು ಮಳೆ ಸಾಧ್ಯತೆ

Karnataka Rains

Krishnaveni K

ಬೆಂಗಳೂರು , ಶುಕ್ರವಾರ, 3 ಅಕ್ಟೋಬರ್ 2025 (08:36 IST)
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಈ ಕೆಲವು ಜಿಲ್ಲೆಗಳಿಗೆ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಅಕ್ಟೋಬರ್ 2 ರಿಂದ ಕರಾವಳಿ ಮತ್ತು ಪಶ್ಚಿಮ ಘಟ್ಟದ ಆಸುಪಾಸಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಅಥವಾ ಮೋಡ ಕವಿದ ವಾತಾವರಣವಿರಲಿದೆ ಎನ್ನಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ದೊಡ್ಡ ಬಳ್ಳಾಪುರ, ಕೋಲಾರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.

ಉಡುಪಿ, ಮೈಸೂರು, ತುಮಕೂರು, ಚಿತ್ರದುರ್ಗ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಮೋಡ ಕವಿದ ಅಥವಾ ಬಿಸಿಲಿನ ವಾತಾವರಣವಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ