Publish Date: Tue, 11 Nov 2025 (08:26 IST)
Updated Date: Tue, 11 Nov 2025 (08:28 IST)
ಬೆಂಗಳೂರು: ರಾಜ್ಯಾದ್ಯಂತ ಈಗ ಮಳೆಯ ಅಬ್ಬರ ಕಡಿಮೆಯಾಗಿದೆ. ಹಾಗಿದ್ದರೂ ಕೆಲವು ಕಡೆ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಇಂದು ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ.
ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಈಗ ಮಳೆಯ ಅಬ್ಬರ ಕಡಿಮೆಯಾಗಿದೆ. ಹಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಧ್ಯಾಹ್ನದ ನಂತರ ಕೊಂಚ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಆದರೆ ಇಂದು ಮಳೆಯ ಸಾಧ್ಯತೆ ತೀರಾ ಕಡಿಮೆ.
ಹವಾಮಾನ ವರದಿಗಳ ಪ್ರಕಾರ ಈ ವಾರ ಕೆಲವೊಂದು ಕಡೆ ಒಂದೆರಡು ದಿನ ಸಣ್ಣ ಮಳೆಯಾಗುವುದು ಬಿಟ್ಟರೆ ವಾರವಿಡೀ ಮಳೆಯ ಸೂಚನೆಯಿಲ್ಲ. ಮಳೆಯ ಅಬ್ಬರ ಕಡಿಮೆಯಾಗುತ್ತಿದ್ದು ಇದೀಗ ವಾತಾವರಣ ಚಳಿಗಾಲದತ್ತ ಬದಲಾಗುತ್ತಿದೆ.
ಇಂದು ಕೊಡಗು, ಚಾಮರಾಜಗರ ಜಿಲ್ಲೆಗಳಲ್ಲಿ ಮೋಡ ಕವಿದ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಬೆಂಗಳೂರು, ಕೋಲಾರ, ತುಮಕೂರು, ಚಿತ್ರದುರ್ಗ, ರಾಯಚೂರು, ಬೀದರ್, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬಾಗಲಕೋಟೆ, ದಾವಣಗೆರೆ, ಯಾದಗಿರಿ, ಧಾರವಾಡ, ಹುಬ್ಬಳ್ಳಿ, ಶಿವಮೊಗ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.