Select Your Language

Notifications

webdunia
webdunia
webdunia
webdunia

Karnataka Weather: ವಾರಂತ್ಯದಲ್ಲಿ ಮಳೆಯಿಲ್ಲ, ಆದರೆ ಹವಾಮಾನ ಎಚ್ಚರಿಕೆ ಗಮನಿಸಿ

Karnataka Rains

Krishnaveni K

ಬೆಂಗಳೂರು , ಶನಿವಾರ, 6 ಡಿಸೆಂಬರ್ 2025 (08:45 IST)
ಬೆಂಗಳೂರು: ವಾರಂತ್ಯದಲ್ಲಿ ರಾಜ್ಯದಲ್ಲಿ ಮಳೆಯ ಸೂಚನೆಯಿಲ್ಲ. ಆದರೆ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಯಾಗಲಿದ್ದು ಈ ಎಚ್ಚರಿಕೆ ಗಮನಿಸಿ.

ಈ ವಾರದ ಆರಂಭದಲ್ಲಿ ದಿತ್ವಾ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಮಳೆ, ವಿಪರೀತ ಚಳಿ ಕಂಡುಬಂದಿತ್ತು. ಬೆಂಗಳೂರಿನಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿತ್ತು. ಆದರೆ ವಾರಂತ್ಯಕ್ಕೆ ಪರಿಸ್ಥಿತಿ ಸ್ವಲ್ಪ ಸುಧಾರಿಸಿತ್ತು.

ಆದರೆ ಈ ವಾರಂತ್ಯಕ್ಕೆ ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣವಿರಲಿದೆ. ಉಳಿದಂತೆ ಬಿಸಿಲಿರಲಿದೆ. ಹಾಗಿದ್ದರೂ ವಾರಂತ್ಯಕ್ಕೆ ತಾಪಮಾನ ಮತ್ತಷ್ಟು ಇಳಿಕೆಯಾಗಲಿದೆ. ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ರಾಯಚೂರು, ಬೀದರ್, ಬೆಳಗಾವಿ, ಯಾದಗಿರಿ, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಗದಗ, ದಾವಣಗೆರೆ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಕಂಡುಬರುವುದು. ವಾರಂತ್ಯದಲ್ಲಿ ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 26 ಡಿಗ್ರಿ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ