Publish Date: Mon, 16 Mar 2026 (08:34 IST)
Updated Date: Mon, 16 Mar 2026 (08:37 IST)
ಬೆಂಗಳೂರು: ಕಳೆದ ಎರಡು ವಾರಗಳಿಂದ ಬಿರುಬಿಸಲಿನಿಂದ ಬೇಸತ್ತಿದ್ದ ಜನಕ್ಕೆ ಈಗ ಗುಡ್ ನ್ಯೂಸ್. ಈ ವಾರ ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯಾಗುವ ಸೂಚನೆಯಿದೆ.
ವಾರಂತ್ಯಕ್ಕೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿತ್ತು. ವಿಪರೀತ ಬಿಸಿಲಿನಿಂದ ಕಂಗೆಟ್ಟಿದ್ದ ಜನಕ್ಕೆ ಮಳೆ ಕೊಂಚ ತಂಪು ನೀಡಿತ್ತು. ಈ ವಾರವೂ ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ.
ವಾರದ ಮೊದಲ ಎರಡು ದಿನ ಮತ್ತು ವಾರಂತ್ಯದ ಒಂದೆರಡು ದಿನ ಮಳೆಯ ಸೂಚನೆಯಿದೆ. ರಾಜ್ಯ ರಾಜಧಾನಿ ಬೆಂಗಳೂರು, ಉತ್ತರ ಕನ್ನಡ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಕೊಡಗು, ಹಾಸನ, ಕೋಲಾರ, ತುಮಕೂರು, ಚಾಮರಾಜನಗರ, ರಾಮನಗರ, ಚಿತ್ರದುರ್ಗ, ಹಾವೇರಿ, ಗದಗ, ಬೀದರ್, ಕೊಪ್ಪಳ, ರಾಯಚೂರು, ಬಳ್ಳಾರಿ, ಕಲಬುರಗಿ, ಶಿವಮೊಗ್ಗ, ಧಾರವಾಡ, ದಾವಣಗೆರೆ, ಯಾದಗಿರಿ ಜಿಲ್ಲೆಗಳಲ್ಲಿ ಈ ವಾರ ಮಳೆಯಾಗುವ ಸಾಧ್ಯತೆಯಿದೆ.
ಮಳೆಯಿಂದಾಗಿ ಈ ವಾರ ರಾಜ್ಯದ ಗರಿಷ್ಠ ತಾಪಮಾನದಲ್ಲಿ ಕೊಂಚ ಇಳಿಕೆಯಾಗಲಿದೆ. ಈ ವಾರ ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 30-32 ಡಿಗ್ರಿ ಆಸುಪಾಸಿನಲ್ಲಿರಲಿದೆ. ಕನಿಷ್ಠ ತಾಪಮಾನ 18-19 ಡಿಗ್ರಿಯಷ್ಟು ಕಂಡುಬರಲಿದೆ.