Publish Date: Wed, 18 Mar 2026 (08:32 IST)
Updated Date: Wed, 18 Mar 2026 (08:34 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದು ಯಾವ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಇಲ್ಲಿದೆ ಇಂದಿನ ಹವಾಮಾನ ವರದಿ.
ಬೇಸಿಗೆಯ ಬೇಗೆಯ ನಡುವೆ ದಿಡೀರ್ ಮಳೆಯಾಗುತ್ತಿರುವುದು ವಾತಾವರಣವನ್ನು ಕೊಂಚ ತಂಪು ಮಾಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದೆ. ಕೆಲವೆಡೆ ಆಲಿಕಲ್ಲು ಮಳೆಯಾಗಿರುವ ವರದಿಯೂ ಆಗಿದೆ.
ಇಂದು ಕೂಡಾ ಕೆಲವೇ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ದಕ್ಷಿಣ ಕನ್ನಡದ ಕೆಲವು ಭಾಗಗಳು, ಚಿಕ್ಕಮಗಳೂರು, ಮಂಡ್ಯ, ಬೆಂಗಳೂರು, ರಾಮನಗರ, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ಬೀದರ್, ರಾಯಚೂರು, ಬೆಳಗಾವಿ, ಯಾದಗಿರಿ, ಹುಬ್ಬಳ್ಳಿ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.
ಉಳಿದ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಅಥವಾ ಬಿಸಿಲಿನ ವಾತಾವರಣ ಕಂಡುಬರುವುದು. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 18 ಡಿಗ್ರಿಯಷ್ಟಿರಲಿದೆ ಎಂದು ತಿಳಿದುಬಂದಿದೆ.