Publish Date: Tue, 31 Mar 2026 (08:29 IST)
Updated Date: Tue, 31 Mar 2026 (08:31 IST)
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆಯ ಅಬ್ಬರ ಇನ್ನೂ ನಿಂತಿಲ್ಲ. ಇಂದು ಈ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ವಾರದಿಂದ ಮಳೆಯಾಗುತ್ತಿದೆ. ನಿನ್ನೆಯೂ ಕೆಲವು ಕಡೆ ಮಳೆಯಾಗಿತ್ತು. ಹವಾಮಾನ ವರದಿಗಳ ಪ್ರಕಾರ ಈ ವಾರಂತ್ಯದವರೆಗೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಇಂದು ಯಾವ ಜಿಲ್ಲೆಗಳಿಗೆ ಮಳೆಯಾಗಿದೆ ಎಂದು ಗಮನಿಸಿ.
ಇಂದು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಇಂದು ಬಹುತೇಕ ಬಿಸಿಲು ಅಥವಾ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ನಿನ್ನೆಗೆ ಹೋಲಿಸಿದರೆ ಇಂದು ಸೆಖೆ ಹೆಚ್ಚಾಗಲಿದೆ.
ಇಂದು ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 33 ಡಿಗ್ರಿಯಷ್ಟಿರಲಿದೆ. ಇಂದು ಕನಿಷ್ಠ ತಾಪಮಾನ ಸರಾಸರಿ 21 ಡಿಗ್ರಿಯಷ್ಟು ಕಂಡುಬರಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂದು ಗರಿಷ್ಠ ತಾಪಮಾನ 33 ಡಿಗ್ರಿಯಷ್ಟಿರಲಿದೆ. ನಾಳೆ ಮತ್ತಷ್ಟು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಯಿದೆ.