Publish Date: Wed, 29 Apr 2026 (08:30 IST)
Updated Date: Wed, 29 Apr 2026 (08:32 IST)
ಬೆಂಗಳೂರು: ರಾಜ್ಯದಲ್ಲಿ ಉರಿಬಿಸಿಲಿನ ನಡುವೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದೆ. ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದ್ದು ಇಂದಿನ ಹವಾಮಾನ ವರದಿ ಇಲ್ಲಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗ ಕಡುಬೇಸಿಗೆ ತಾಂಡವವಾಡುತ್ತಿದೆ. ಹಗಲಿಡೀ ಜನ ಬೆವರು ಸುರಿಸುವಂತಾಗಿದೆ. ಹಾಗಿದ್ದರೂ ಕೆಲವು ಜಿಲ್ಲೆಗಳಿಗೆ ಮಾತ್ರ ಮಳೆಯ ಸಿಂಚನವಾಗುತ್ತಿದೆ. ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ.
ವಿಶೇಷವಾಗಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆಯಿದೆ. ಉಳಿದಂತೆ ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ಉಳಿದ ಜಿಲ್ಲೆಗಳಲ್ಲಿ ಉರಿಬಿಸಿಲಿನ ವಾತಾವರಣವಿರಲಿದೆ. ವಿಜಯಪುರ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಆಸುಪಾಸು ತಲುಪಲಿದೆ. ಕರ್ನಾಟಕದ ಸರಾಸರಿ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 23 ಡಿಗ್ರಿಯಷ್ಟಿರಲಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ