Publish Date: Tue, 04 Aug 2026 (08:43 IST)
Updated Date: Tue, 04 Aug 2026 (08:45 IST)
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮಳೆಯ ತೀವ್ರತೆಯನ್ನು ಆಧರಿಸಿ ವಿವಿಧ ಜಿಲ್ಲೆಗಳಿಗೆ ಹೆಚ್ಛಿನ ಜಾಗರೂಕತೆ ವಹಿಸುವಂತೆ ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅತಿ ಹೆಚ್ಚು ಮಳೆಯಾಗುವ ಹಾಗೂ ಪ್ರವಾಹ ಅಥವಾ ಗುಡ್ಡ ಕುಸಿತದ ಸಾಧ್ಯತೆಯಿರುವ ಕೆಳಗಿನ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಗರಿಷ್ಠ ಮಟ್ಟದ ರೆಡ್ ಅಲರ್ಟ್ ನೀಡಲಾಗಿದೆ:
ರೆಡ್ ಅಲರ್ಟ್ ಜಿಲ್ಲೆಗಳು
ದಕ್ಷಿಣ ಕನ್ನಡ
ಉಡುಪಿ
ಉತ್ತರ ಕನ್ನಡ
ಶಿವಮೊಗ್ಗ ಮತ್ತು ಚಿಕ್ಕಮಗಳೂರು (ಮಲೆನಾಡು ಭಾಗ)
ಸೂಚನೆ: ಈ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ನದಿ ಪಾತ್ರದ ಹಾಗೂ ತಗ್ಗು ಪ್ರದೇಶದ ಜನರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಆರೆಂಜ್ ಅಲರ್ಟ್ – ಭಾರಿ ಮಳೆ
ಧಾರಾಕಾರ ಮಳೆಯಾಗುವ ಮುನ್ಸೂಚನೆ ಹೊಂದಿರುವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ:
ಕೊಡಗು
ಹಾಸನ
ಬೆಳಗಾವಿ (ಘಟ್ಟ ಪ್ರದೇಶಗಳು)
ಯೆಲ್ಲೋ ಅಲರ್ಟ್ – ಸಾಧಾರಣದಿಂದ ಭಾರಿ ಮಳೆ
ಸಾಧಾರಣದಿಂದ ಸಾಧಾರಣಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿರುವ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ:
ಉತ್ತರ ಒಳನಾಡು: ಧಾರ್ವಾಡ್, ಹಾವೇರಿ, ಗದಗ, ಕಲ್ಬುರ್ಗಿ ಮತ್ತು ಬೀದರ್.
ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಮತ್ತು ದಾವಣಗೆರೆ.
ಕರಾವಳಿ ತೀರದಲ್ಲಿ ಗಾಳಿಯ ವೇಗ ಗಂಟೆಗೆ 45-55 ಕಿ.ಮೀ ತಲುಪುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಹಾಗೂ ಜಲಪಾತಗಳಿರುವ ಪ್ರದೇಶಗಳಲ್ಲಿ ನೀರಿಗಿಳಿಯದಂತೆ ಮತ್ತು ಗುಡ್ಡ ಕುಸಿತದ ಅಪಾಯವಿರುವ ರಸ್ತೆಗಳಲ್ಲಿ ಪ್ರಯಾಣಿಸುವಾಗ ಎಚ್ಚರದಿಂದಿರುವಂತೆ ಆಡಳಿತ ಮಂಡಳಿ ಕೋರಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ