Webdunia - Bharat's app for daily news and videos

Install App

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯಿರಲಿದೆಯೇ, ಇಲ್ಲಿದೆ ಹವಾಮಾನ ವರದಿ

ಕೃಷ್ಣವೇಣಿ ಕೆ
ಶನಿವಾರ, 5 ಸೆಪ್ಟಂಬರ್ 2026 (08:53 IST)
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಪ್ರಭಾವ ಮುಂದುವರಿದಿದ್ದು, ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ವಿವಿಧ ಭಾಗಗಳಲ್ಲಿ ಮಳೆಯ ತೀವ್ರತೆ ವಿಭಿನ್ನವಾಗಿರಲಿದೆ.

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿಯ ತೀವ್ರತೆ ಹೆಚ್ಚಿರಲಿದ್ದು, ಸಾಧಾರಣದಿಂದ ಕೂಡಿ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಅಲೆಗಳ ಆರ್ಭಟವಿರುವುದರಿಂದ ಮೀನುಗಾರರಿಗೆ ಜಾಗರೂಕರಾಗಿರಲು ಸೂಚಿಸಲಾಗಿದೆ. ಇನ್ನು ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಆಹ್ಲಾದಕರ ವಾತಾವರಣದ ಜತೆಗೆ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು: ಮೋಡಕವಿದ ವಾತಾವರಣ ಮತ್ತು ಜಿಟಿಜಿಟಿ ಮಳೆ
ರಾಜಧಾನಿ ಬೆಂಗಳೂರು ನಗರ್, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಡೀ ದಿನ ಮೋಡಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆ ಹಗುರದಿಂದ ಸಾಧಾರಣ ಜಿಟಿಜಿಟಿ ಮಳೆ ಅಥವಾ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಸಹ ಹಗುರ ಮಳೆಯಾಗಬಹುದು.

ಉತ್ತರ ಒಳನಾಡು: ಒಣ ಹವೆ ಮತ್ತು ಹಗುರ ಮಳೆ
ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಯಿದೆ. ಕಲ್ಯಾಣ ಕರ್ನಾಟಕ ಭಾಗದ ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಾಪಮಾನ ಕೊಂಚ ಹೆಚ್ಚಿರಲಿದ್ದು, ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಆದರೆ, ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಸಂಜೆ ವೇಳೆ ಗುಡುಗು ಸಹಿತ ಹಗುರ ಮಳೆಯಾಗುವ ಸಣ್ಣ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments