Karnataka Weather: ವಾರಂತ್ಯಕ್ಕೆ ಮಳೆಯಿರುತ್ತಾ, ಈ ಜಿಲ್ಲೆಯವರು ಈ ಎಚ್ಚರಿಕೆ ಗಮನಿಸಿ

Krishnaveni K
ಶನಿವಾರ, 13 ಸೆಪ್ಟಂಬರ್ 2025 (08:38 IST)
ಬೆಂಗಳೂರು: ರಾಜ್ಯದಲ್ಲಿ ಈ ವಾರ ನಿರೀಕ್ಷಿಸಿದಷ್ಟು ಮಳೆಯಿಲ್ಲವಾದರೂ ಕೆಲವೆಡೆ ಮಾತ್ರ ಗುಡುಗು ಸಹಿತ ಮಳೆಯಾಗಿತ್ತು. ಈ ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯೇ? ಯಾವ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಇಲ್ಲಿದೆ ನೋಡಿ ವಿವರ.

ಈ ವಾರ ಆರಂಭದ ಮೂರು ದಿನಗಳಲ್ಲಿ ರಾಜ್ಯಾದ್ಯಂತ ಮಳೆಯಿರಲಿಲ್ಲ. ಅತೀ ಹೆಚ್ಚು ಮಳೆಯಾಗುತ್ತಿದ್ದ ಕರಾವಳಿ ಜಿಲ್ಲೆಗಳಲ್ಲೂ ಬಿಸಿಲು ಬಣಗುಡುತ್ತಿತ್ತು. ಬೆಂಗಳೂರಿನಲ್ಲೂ ಬಿಸಿಲಿನ ವಾತಾವರಣವಿತ್ತು. ಆದರೆ ಬುಧವಾರದಿಂದ ಮತ್ತೆ ಕೆಲವು ಕಡೆ ಮಳೆ ಶುರುವಾಗಿದೆ.

ಈ ವಾರಂತ್ಯದಲ್ಲೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ವಿಶೇಷವೆಂದರೆ ಮಳೆಯ ಜೊತೆಗೆ ಗುಡುಗೂ ಕಂಡುಬರಲಿದೆ. ಕರಾವಳಿ ಜಿಲ್ಲೆಗಳ ಪೈಕಿ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾರಂತ್ಯಕ್ಕೆ ಭಾರೀ ಮಳೆಯಾಗಲಿದೆ. ಉಡುಪಿಯಲ್ಲಿ ಸಾಧಾರಣ ಮಳೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ಬೆಳಗಾವಿ, ವಿಜಯಪುರ, ರಾಯಚೂರು, ಹಾವೇರಿ, ಗದಗ, ಕೊಪ್ಪಳ, ದಾವಣಗೆರೆ, ಬಾಗಲಕೋಟೆ, ಹುಬ್ಬಳ್ಳಿ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ಭಾರೀ ಮಳೆಯಾಗಲಿದೆ. ಉಳಿದಂತೆ ಬೀದರ್, ಕೋಲಾರ, ತುಮಕೂರು, ಭದ್ರಾವತಿ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಬೆಂಗಳೂರು, ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಬಿಸಿಲು ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments