Select Your Language

Notifications

webdunia
webdunia
webdunia
webdunia

Karnataka Weather: ಈ ಜಿಲ್ಲೆಯವರಿಗೆ ಇಂದು ಭಾರೀ ಮಳೆ

Karnataka Rains

Krishnaveni K

ಬೆಂಗಳೂರು , ಬುಧವಾರ, 15 ಅಕ್ಟೋಬರ್ 2025 (08:40 IST)
ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಮಾತ್ರ ಈಗಲೂ ಮಳೆಯಾಗುತ್ತಲೇ ಇದೆ. ಹವಾಮಾನ ವರದಿ ಪ್ರಕಾರ ಇಂದು ಕೆಲವು ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅಕ್ಟೋಬರ್ 15 ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ. ಇದಾದ ಬಳಿಕ ಮಳೆಯ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗುತ್ತಾ ಬರಲಿದೆ.

ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ, ಉಡುಪಿ, ಬೆಂಗಳೂರು, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಬೀದರ್, ಯಾದಗಿರಿ, ಕಲಬುರಗಿ, ರಾಯಚೂರು, ಕೊಪ್ಪಳ, ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇನ್ನು ಹಾಸನ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬಳ್ಳಾರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಸಣ್ಣ ಮಟ್ಟಿಗೆ ಮಳೆಯಾಗಲಿದೆ.

ಚಿಕ್ಕಮಗಳೂರು, ಹಾವೇರಿ, ಗದಗ, ದಾವಣಗೆರೆ, ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಇದೇ 22ರಂದು ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ